ನೋಟು ನಿಷೇಧದ ವಿಚಾರವಾಗಿ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ರಾಜ್ಯಸಭೆಯಲ್ಲಿ ಡಿ.16 ರಂದೂ ಸಹ ಗದ್ದಲ ಉಂಟು ಮಾಡಿದ್ದರ ಪರಿಣಾಮವಾಗಿ ರಾಜ್ಯಸಭೆಯ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಮೇಲ್ಮನೆಯ ನಿಯಮಗಳನ್ನು ಗಾಳಿಗೆ ತೂರಿ, ಘೋಷಣೆ ಕೂಗುವುದು ಹಾಗೂ ಭಿತ್ತಿಪತ್ರಗಳನ್ನು ಪ್ರದರ್ಶಿಸಲಾಗಿದ್ದು, ಅಧಿವೇಶನ ವ್ಯರ್ಥಗೊಂಡಿದೆ ಎಂದು ರಾಜ್ಯಸಭೆಯ ಅಧ್ಯಕ್ಷ, ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಬೇಸರ ವ್ಯಕ್ತಪಡಿಸಿದ್ದಾರೆ.