ಕೆಲಸದ ಒತ್ತಡದಿಂದ ನೊಂದು ಗುಂಡಿಕ್ಕಿ ಆತ್ಮಹತ್ಯೆ ಮಾಡಿಕೊಂಡ ಆಂಧ್ರ ಪೇದೆ

ಕೃಷ್ಣ ಜಿಲ್ಲೆಯ ಗನ್ನಾವರಂ ಪೊಲೀಸ್ ಠಾಣೆಯಲ್ಲಿ ರೈಟರ್ ಆಗಿದ್ದ ಪೊಲೀಸ್ ಪೇದೆಯೊಬ್ಬರು ಕೆಲಸದ ಒತ್ತಡದಿಂದ ನೊಂದು ತಮ್ಮ ಸರ್ವಿಸ್....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ವಿಜಯವಾಡ: ಕೃಷ್ಣ ಜಿಲ್ಲೆಯ ಗನ್ನಾವರಂ ಪೊಲೀಸ್ ಠಾಣೆಯಲ್ಲಿ ರೈಟರ್ ಆಗಿದ್ದ ಪೊಲೀಸ್ ಪೇದೆಯೊಬ್ಬರು ಕೆಲಸದ ಒತ್ತಡದಿಂದ ನೊಂದು ತಮ್ಮ ಸರ್ವಿಸ್ ರಿವಾಲ್ವರ್ ನಿಂದ ಹಣೆಗೆ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೂಲಗಳ ಪ್ರಕಾರ, 55 ವರ್ಷದ ತಂಗಳ ದೇವಕೃಪ ಡೇವಿಡ್ ರಾಜು ಎಂಬುವವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಅವರು ಬರೆದು ಡೆತ್ ನೋಟ್ ಮಾತ್ರ ಇನ್ನೂ ಪತ್ತೆಯಾಗಿಲ್ಲ.
ರಾಜು ಅವರು ಡೆತ್ ನೋಟ್ ನಲ್ಲಿ ತಮಗೆ ಕಿರುಕುಳ ನೀಡಿದ ಅಧಿಕಾರಿಗಳು ಹೆಸರು ಬರೆದಿರುವ ಶಂಕೆ ವ್ಯಕ್ತವಾಗಿದೆ.
ನನ್ನ ಪತಿ ಡೆತ್ ನೋಟ್ ಬರೆದಿದ್ದು, ತನಿಖಾ ಅಧಿಕಾರಿಗಳು ಅದನ್ನು ಬಹಿರಂಗಪಡಿಸುತ್ತಿಲ್ಲ ಎಂದಿರುವ ರಾಜು ಅವರ ಪತ್ನಿ ಎಲಿಜಬೆತ್ ರಾಣಿ ಅವರು, ಪೊಲೀಸರು ಅದನ್ನು ಏಕೆ ಬಹಿರಂಗಪಡಿಸುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com