ಹಿಮಾಚಲಪ್ರದೇಶ: ಐಎಸ್ಐಎಸ್ ನಂಟು ಆರೋಪದ ಮೇಲೆ ಬೆಂಗಳೂರ ವ್ಯಕ್ತಿ ಬಂಧನ

ಐಎಸ್ಐಎಸ್ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ ಆರೋಪದ ಮೇಲೆ ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯ ಬಂಜಾರ ಪ್ರದೇಶದಲ್ಲಿ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಶಿಮ್ಲಾ: ಐಎಸ್ಐಎಸ್ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ ಆರೋಪದ ಮೇಲೆ ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯ ಬಂಜಾರ ಪ್ರದೇಶದಲ್ಲಿ ಬೆಂಗಳೂರು ಮೂಲದ 23 ವರ್ಷದ ವ್ಯಕ್ತಿಯನ್ನು ಶನಿವಾರ ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತ ಆರೋಪಿ ಅಬೀದ್ ಖಾನ್ ಎಂದು ಗುರುತಿಸಲಾಗಿದ್ದು, ಕಳೆದ ನಾಲ್ಕೈದು ತಿಂಗಳಿಂದ ನಕಲಿ ಗುರುತಿನ ಮೇಲೆ ಚರ್ಚ್ ವೊಂದರಲ್ಲಿ ವಾಸಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳೀಯ ಪೊಲೀಸರ ನೆರವಿನೊಂದಿಗೆ ಎನ್ಐಎ ಅಧಿಕಾರಿಗಳು ಅಬೀದ್ ಖಾನ್ ನನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿರುವುದಾಗಿ ಪೊಲೀಸ್ ಮಹಾ ನಿರ್ದೇಶಕ ಸಂಜಯ್ ಕುಮಾರ್ ಅವರು ತಿಳಿಸಿದ್ದಾರೆ.
ದೆಹಲಿಯಲ್ಲಿ ಬಂಧಿತರಾದ ಕೆಲವು ಶಂಕಿತ ಉಗ್ರರು ನೀಡಿದ ಮಾಹಿತಿ ಆಧಾರದ ಮೇಲೆ ಅಬೀದ್ ಖಾನ್ ನನ್ನು ಬಂಧಿಸಲಾಗಿದ್ದು, ವಿಚಾರಣೆ ವೇಳೆ ತಾನು ಐಎಸ್ಐಎಸ್ ಸಿದ್ಧಾಂತಗಳನ್ನು ಪ್ರೇರೇಪಿತನಾಗಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com