ಸೇನೆಯ ವಿಚಾರದಲ್ಲಿ ರಾಜಕೀಯ ಸಲ್ಲ: ಸಿಪಿಐ(ಎಂ)

ಸೇವಾ ಹಿರಿತನವನ್ನು ಬದಿಗಿರಿಸಿ ನೂತನ ಸೇನಾ ಮುಖ್ಯಸ್ಥರನ್ನು ನೇಮಕ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ಸಿಪಿಐ(ಎಂ) ಟೀಕಿಸಿದೆ.
ಸಿಪಿಐ-ಎಂ
ಸಿಪಿಐ-ಎಂ
Updated on
ನವದೆಹಲಿ: ಸೇವಾ ಹಿರಿತನವನ್ನು ಬದಿಗಿರಿಸಿ ನೂತನ ಸೇನಾ ಮುಖ್ಯಸ್ಥರನ್ನು ನೇಮಕ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ಸಿಪಿಐ(ಎಂ) ಟೀಕಿಸಿದೆ.
ನೂತನ ಸೇನಾ ಮುಖ್ಯಸ್ಥರನ್ನು ಸೇವಾ ಹಿರಿತನವನ್ನು ಬದಿಗಿರಿಸಿ ನೇಮಕ ಮಾಡಲಾಗಿದೆ, ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಕ್ರಮ ಸರ್ಕಾರದ ಉದ್ದೇಶಗಳ ಪ್ರಶ್ನೆಗಳು ಉದ್ಭವಿಸುವಂತೆ ಮಾಡಿದೆ ಎಂದು ಸಿಪಿಐ(ಎಂ) ಅಸಮಾಧಾನ ವ್ಯಕ್ತಪಡಿಸಿದೆ.   
ಭಾರತೀಯ ಸೇನೆಯನ್ನು ರಾಜಕೀಯ ಹಸ್ತಕ್ಷೇಪಗಳಿಗೆ ಗುರಿ ಮಾಡುವುದು ಸರಿಯಲ್ಲ ಎಂದು ಸಿಪಿಐ(ಎಂ) ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದೆ. ಭಾರತೀಯ ಸೇನೆಗೆ ಲೆ| ಜನರಲ್ ಬಿಪಿನ್ ರಾವತ್ ಅವರನ್ನು ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದ್ದು, ಅವರಿಗಿಂತ ಸೇವಾವಧಿಯಲ್ಲಿ ಹಿರಿಕರೆನಿಸಿರುವ ಲೆಫ್ಟಿನೆಂಟ್ ಜನರಲ್'ಗಳಿದ್ದರೂ ಬಿಪಿನ್ ರಾವತ್ ಅವರನ್ನು ಸೇನಾ ಮುಖ್ಯಸ್ಥರನ್ನಾಗಿ ನೇಮಕ ಮಾಡಿರುವ ಬಗ್ಗೆ ವಿಪಕ್ಷಗಳಿಂದ ಆಕ್ಷೇಪ ವ್ಯಕ್ತವಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com