ಕೇಂದ್ರೀಯ ತನಿಖಾ ಆಯೋಗದಿಂದ ವಿಚಾರಣೆ, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ಪ್ರತೀಕಾರದ, ಅನೈತಿಕ, ತಾಂತ್ರಿಕವಾಗಿ ಸರಿಯಲ್ಲದ ಕ್ರಮವಾಗಿದ್ದು, ದೇಶದ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುತ್ತದೆ. ದೇಶದ ನಾಗರಿಕ ಸೇವೆಗಳ ಮುಖ್ಯಸ್ಥರ ಮನೆ ಮೇಲೆ ದಾಳಿ ನಡೆಸುವ ಮೂಲಕ ಸಂಸ್ಥೆಯನ್ನು ಅಪಮೌಲ್ಯಗೊಳಿಸುತ್ತಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.