ವಿಜಯವಾಡ: ಬಿಜೆಪಿ ವಿರುದ್ಧ ಹರಿಹಾಯ್ದಿದ್ದ ಜನಸೇನಾ ಮುಖ್ಯಸ್ಥ ಮತ್ತು ತೆಲುಗಿನ ಖ್ಯಾತ ನಟ ಪವನ್ ಕಲ್ಯಾಣ್ ನೋಟುಗಳ ನಿಷೇಧದ ಬಗ್ಗೆ ಆರ್ ಬಿಐ ಗವರ್ನರ್ ಊರ್ಜಿತ್ ಪಟೇಲ್ ವಿರುದ್ಧ ನಿನ್ನೆ ಸರಣಿ ಟ್ವೀಟ್ ಗಳ ಮೂಲಕ ಟೀಕೆಯ ಸುರಿಮಳೆಗೈದಿದ್ದಾರೆ. ಆದರೆ ಈ ಬಾರಿ ಬಿಜೆಪಿ ನಾಯಕರು ಪವನ್ ಕಲ್ಯಾಣ್ ವಿರುದ್ಧ ಹರಿಹಾಯ್ದಿದ್ದು ಪವನ್ ಕಲ್ಯಾಣ್ ಅವರು ಮೊದಲು ತನ್ನ ಮೂಲಭೂತ ಹಕ್ಕನ್ನು ಪಡೆಯಲು ಪ್ರಯತ್ನಿಸಲಿ ಎಂದು ಸಲಹೆ ನೀಡಿದ್ದಾರೆ.