ಹಾರ್ದಿಕ್ ಪಟೇಲ್ ನ್ನು ಬಿಡುಗಡೆ ಮಾಡುವಂತೆ ರಾಜಸ್ತಾನ ಸರ್ಕಾರಕ್ಕೆ ಕೇಜ್ರಿವಾಲ್ ಮನವಿ
ಪಾಟೀದಾರ್ ಸಮುದಾಯದ ನಾಯಕ ಹಾರ್ದಿಕ್ ಪಟೆಲ್ ಅವರನ್ನು ವಿಲಕ್ಷಣ ವ್ಯಕ್ತಿ ಎಂದಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಹಾರ್ದಿಕ್ ಪಟೇಲ್ ಅವರನ್ನು ಬಿಡುಗಡೆ ಮಾಡು ಮಾಡುವಂತೆ ರಾಜಸ್ತಾನ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ನವದೆಹಲಿ: ಪಾಟೀದಾರ್ ಸಮುದಾಯದ ನಾಯಕ ಹಾರ್ದಿಕ್ ಪಟೆಲ್ ಅವರನ್ನು ವಿಲಕ್ಷಣ ವ್ಯಕ್ತಿ ಎಂದಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಹಾರ್ದಿಕ್ ಪಟೇಲ್ ಅವರನ್ನು ಬಿಡುಗಡೆ ಮಾಡು ಮಾಡುವಂತೆ ರಾಜಸ್ತಾನ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಪಾಟೀದಾರ್ ಸಮುದಾಯದ ನಾಯಕನನ್ನು ಬಂಧಿಸಿದ್ದೀರಿ, ವಸುಂಧರಾ ರಾಜೆ ನೇತೃತ್ವದ ಸರ್ಕಾರ ಅವರನ್ನು ತಕ್ಷಣವೇ ಬಿಡುಗಡೆಗೊಳಿಸಬೇಕು ಎಂದು ಟ್ವಿಟರ್ ಮೂಲಕ ಆಗ್ರಹಿಸಿದ್ದಾರೆ.
ಜೈಪುರ ವಿಮಾನ ನಿಲ್ದಾಣದಿಂದ ಹೊರಬರುತ್ತಿರಬೇಕಾದರೆ ನನ್ನನ್ನು ಬಂಧಿಸಲಾಗಿದೆ ಎಂದು ಹಾರ್ದಿಕ್ ಪಟೇಲ್ ಟ್ವೀಟ್ ಮಾಡಿದ್ದರು. ಹಾರ್ದಿಕ್ ಪಟೇಲ್ ಅವರ ಜೀವಕ್ಕೆ ಅಪಾಯ ಇರುವುದರಿಂದ ಹಾರ್ದಿಕ್ ಪಟೇಲ್ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.