ನವದೆಹಲಿ: ರಾಜಧಾನಿ ದೆಹಲಿಯಲ್ಲಿ ದಟ್ಟ ಮಂಜು ಕವಿದ ವಾತಾವರಣ ಶನಿವಾರ ಕೂಡ ಮುಂದುವರೆದಿದ್ದು, ವಿಮಾನ ಹಾಗೂ ರೈಲು ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ಇಂದು ಬೆಳಿಕ್ಕೆ ಪ್ರಯಾಣ ಆರಂಭಿಸಬೇಕಿದ್ದ 52 ರೈಲುಗಳ ಸಂಚಾರ ವಿಳಂಬವಾಗಲಿದೆ ಎಂದು ರೈಲ್ವೇ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನಸುಕಿನ ವೇಳೆ ಪ್ರಯಾಣ ಆರಂಭಿಸಬೇಕಿದ್ದ 5 ರೈಲುಗಳ ವೇಳಾಪಟ್ಟಿಯನ್ನು ಬದಲಾವಣೆ ಮಾಡಲಾಗಿದ್ದು, 52 ರೈಲುಗಳು ತಡವಾಗಿ ಪ್ರಯಾಣ ಬೆಳೆಸಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರೈಲುಗಳು ತಡವಾಗಿ ಪ್ರಯಾಣ ಬೆಳೆಸುವುದರಿಂದಾಗಿ ಪ್ರಯಾಣಿಕರು ಪರದಾಡುವಂತಾಗಿದ್ದು, ಸಾವಿರಾರು ಪ್ರಯಾಣಿಕರು ರೈಲ್ವೆ ನಿಲ್ದಾಣದಲ್ಲಿ ಸಂಕಷ್ಟಕ್ಕೆ ಸಿಲುಕಿದಂತಾಗಿದೆ.
Advertisement