ಮಣಿಪುರ ಹಿಂಸಾಚಾರ: ರಾಷ್ಟ್ರೀಯ ಹೆದ್ದಾರಿ ತೆರವಿಗೆ 4 ಸಾವಿರ ಪ್ಯಾರಮಿಲಿಟರಿ ಸಿಬ್ಬಂದಿ ರವಾನೆ

ಮಣಿಪುರ ವಿಧಾನಸಭೆಯಲ್ಲಿ ಕೆಲವು ಮಸೂದೆಗಳಿಗೆ ಅಂಗೀಕಾರ ನೀಡಿದ್ದನ್ನು ಖಂಡಿಸಿ ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದಿದ್ದು ಪರಿಸ್ಥಿತಿಯನ್ನು ಹತೋಟಿಗೆ ತರಲು...
ಮಣಿಪುರ ಹಿಂಸಾಚಾರ
ಮಣಿಪುರ ಹಿಂಸಾಚಾರ
Updated on
ಇಂಪಾಲ್: ಮಣಿಪುರ ವಿಧಾನಸಭೆಯಲ್ಲಿ ಕೆಲವು ಮಸೂದೆಗಳಿಗೆ ಅಂಗೀಕಾರ ನೀಡಿದ್ದನ್ನು ಖಂಡಿಸಿ ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದಿದ್ದು ಪರಿಸ್ಥಿತಿಯನ್ನು ಹತೋಟಿಗೆ ತರಲು ಕೇಂದ್ರ ಸರ್ಕಾರ 4 ಸಾವಿರ ಪ್ಯಾರಮಿಲಿಟರಿ ಸಿಬ್ಬಂದಿಯನ್ನು ಕಳುಹಿಸಲು ತೀರ್ಮಾನಿಸಿದೆ. 
ಭೂ ಕಂದಾಯ ಮತ್ತು ಭೂ ಸುಧಾರಣೆ ಮಸೂದೆ, ಮಣಿಪುರ ಅಂಗಡಿಗಳು ಮತ್ತು ಸಂಸ್ಥೆ ಮಸೂದೆ ತಿದ್ದುಪಡಿಯನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿತ್ತು. ಇದಾದ ಬಳಿಕ ನಾಗಾ ಸಮೂದಾಯದವರು ಕಳೆದೆರೆಡು ತಿಂಗಳಿನಿಂದ ಹಿಂಸಾಚಾರ ನಡೆಸುತ್ತಿದ್ದು ಬಂದ್ ಆಗಿರುವ ರಾಷ್ಟ್ರೀಯ ಹೆದ್ದಾರಿ ತೆರವುಗೊಳಿಸುವ ಸಲುವಾಗಿ ಪ್ಯಾರಮಿಲಿಟರಿ ಪಡೆಯನ್ನು ಮಣಿಪುರಕ್ಕೆ ಕಳುಹಿಸಲು ಕೇಂದ್ರ ಮುಂದಾಗಿದೆ. 
ಸದ್ಯ ಮಣಿಪುರದಿಂದ ನಾಗಲ್ಯಾಂಡ್ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ನಾಗಾ ಸಮೂದಾಯದವರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದಾಗಿ ಕಳೆದೆರಡು ತಿಂಗಳಿನಿಂದ ಹೆದ್ದಾರಿ ಬಂದ್ ಆಗಿದ್ದು ಸಾರ್ವಜನಿಕರಿಗೆ ತೀವ್ರ ತೊಂದರೆ ಎದುರಾಗಿದೆ. ಇದನ್ನು ತೆರವುಗೊಳಿಸುವುದೇ ನಮ್ಮ ಮುಖ್ಯ ಉದ್ದೇಶ ಎಂದು ಕೇಂದ್ರ ಗೃಹ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. 
ಕಳೆದ ನವೆಂಬರ್ 1 ರಿಂದ ಯುನೈಟೆಡ್ ನಾಗ ಕೌನ್ಸಿಲ್(ಯುಎನ್ಸಿ) ಮಣಿಪುರದಲ್ಲಿ ಆರ್ಥಿಕ ದಿಗ್ಬಂದನ ಹೇರಿದೆ. ಇನ್ನು ಯುಎನ್ಸಿ ಇಂಪಾಲ್-ಧಿಮಾಪುರ್ ರಾಷ್ಟ್ರೀಯ ಹೆದ್ದಾರಿ-2, ಇಂಪಾಲ್-ಜಿರಿಬಾಮ್ ರಾಷ್ಟ್ರೀಯ ಹೆದ್ದಾರಿ-37ಅನ್ನು ಕಳೆದ 55 ದಿನಗಳಿಂದ ಬಂದ್ ಮಾಡಿದೆ ಎಂದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com