ಚಂಡೀಗಢ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಪಂಜಾಬ್ ವಿಧಾನಸಭೆ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲು ಗುರುವಾರ ಒಪ್ಪಿಕೊಂಡಿದ್ದಾರೆ.
ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಆಶಾ ಕುಮಾರಿ ಹಾಗೂ ಪಂಜಾಬ್ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಇಂದು ದೆಹಲಿಯಲ್ಲಿ ಮನಮೋಹನ್ ಸಿಂಗ್ ಅವರನ್ನು ಭೇಟಿ ಮಾಡಿ, ಪಕ್ಷದ ಪ್ರಣಾಳಿಕೆ ಬಿಡುಗಡೆ ಬಗ್ಗೆ ಚರ್ಚಿಸಿದರು.
ಸಿಂಗ್ ಭೇಟಿ ಬಳಿಕ ಮಾತನಾಡಿದ ಆಶಾ ಕುಮಾರಿ ಅವರು, ಪ್ರಣಾಳಿಕೆ ಸಿದ್ಧಪಡಿಸುವ ಮುನ್ನ ಆರ್ಥಿಕ ತಜ್ಞರೂ ಆಗಿರುವ ಮನಮೋಹನ್ ಸಿಂಗ್ ಅವರ ಸಲಹೆ ಪಡೆಯಲು ಪಕ್ಷ ನಿರ್ಧರಿಸಿದೆ. ಪಂಜಾಬ್ ಮಾಜಿ ಹಣಕಾಸು ಸಚಿವ ಮನಪ್ರಿತ್ ಬಾದಲ್ ಅವರ ನೇತೃತ್ವದ ಸಮಿತಿ ಪಕ್ಷದ ಪ್ರಣಾಳಿಕೆ ಸಿದ್ಧಪಡಿಸುತ್ತಿದೆ ಎಂದು ಹೇಳಿದರು.