ನವದೆಹಲಿ: ಡಿಸೆಂಬರ್ 10ರಂದು ದಕ್ಷಿಣ ದೆಹಲಿಯ ಗ್ರೇಟರ್ ಕೈಲಾಶ್ ನಲ್ಲಿನ ಕಾನೂನು ಸೇವಾ ಸಂಸ್ಥೆಯ ಮೇಲೇ ಕ್ರೈಂ ಬ್ರಾಂಚ್ ಪೊಲೀಸರು ದಾಳಿ ನಡೆಸಿ 13.65 ಕೋಟಿ ರುಪಾಯಿ ಅಕ್ರಮ ಹಣ ವಶಪಡಿಸಿಕೊಂಡಿದ್ದರು. ಪ್ರಕರಣ ಸಂಬಂಧ ಮಾಲೀಕ, ವಕೀಲ ರೋಹಿತ್ ಟಂಡನ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.