ಪಕ್ಷದ ಪ್ರಧಾನ ಕಾರ್ಯದರ್ಶಿಯ ಸಲಹೆ ಪಡೆಯದೆ ಈ ಸಭೆಯನ್ನು ಕರೆಯಲಾಗಿದ್ದು, ಅದರಲ್ಲಿ ಅಂಗೀಕರಿಸಿದ ಪ್ರಸ್ತಾವನೆಗಳು ಅಸಂವಿಧಾನಿಕ ಮತ್ತು ಕಾನೂನಿಗೆ ವಿರುದ್ಧ. ಈ ಸಭೆಯಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಈ ಮೊದಲು ಮುಲಾಯಂ ಸಿಂಗ್ ಯಾದವ್ ತಾವು ಹೊರಡಿಸಿದ ಪತ್ರದಲ್ಲಿ ಹೇಳಿದ್ದರು.