ಸಂವಿಧಾನದ 361ನೇ ವಿಧಿಯ ಅನ್ವಯ ರಾಜ್ಯಪಾಲರು ನ್ಯಾಯಾಲಯಗಳ ಪ್ರಕ್ರಿಯೆಯಿಂದ ಸಂಪೂರ್ಣ ವಿನಾಯಿತಿ ಹೊಂದಿರುತ್ತಾರೆ. 2006ರಲ್ಲಿ ಈ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪನ್ನೂ ನೀಡಿದೆ ಎಂದು ಅಟಾರ್ನಿ ಜನರಲ್ ಮುಕುಲ್ ರೊಹಟಗಿ ಅವರು ನ್ಯಾಯಪೀಠದ ಗಮನಕ್ಕೆ ತಂದ ನಂತರ, ನ್ಯಾಯಾಮೂರ್ತಿಗಳು ನೋಟಿಸ್ ಹಿಂಪಡೆಯುವ ನಿರ್ಧಾರವನ್ನು ಕೈಗೊಂಡಿದ್ದಾರೆ.