ಹಳಿ ತಪ್ಪಿದ ಬೆಂಗಳೂರು- ಕನ್ಯಾಕುಮಾರಿ ಎಕ್ಸ್ ಪ್ರೆಸ್ ರೈಲು : 20 ಪ್ರಯಾಣಿಕರಿಗೆ ಗಾಯ

ಕನ್ಯಾಕುಮಾರಿಯಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಐಲ್ಯಾಂಡ್ ಎಕ್ಸ್ ಪ್ರೆಸ್ ರೈಲು ತಮಿಳುನಾಡಿನ ವೆಲ್ಲೂರು ಜಿಲ್ಲೆಯ ಬಳಿ ಹಳಿತಪ್ಪಿದ ಪರಿಣಾಮ 20 ಪ್ರಯಾಣಿಕರು ಗಾಯಗೊಂಡಿದ್ದಾರೆ.
ಹಳಿ ತಪ್ಪಿದ ಬೆಂಗಳೂರು- ಕನ್ಯಾಕುಮಾರಿ ಎಕ್ಸ್ ಪ್ರೆಸ್ ರೈಲು
ಹಳಿ ತಪ್ಪಿದ ಬೆಂಗಳೂರು- ಕನ್ಯಾಕುಮಾರಿ ಎಕ್ಸ್ ಪ್ರೆಸ್ ರೈಲು

ಚೆನ್ನೈ: ಕನ್ಯಾಕುಮಾರಿಯಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಐಲ್ಯಾಂಡ್ ಎಕ್ಸ್ ಪ್ರೆಸ್ ರೈಲು ತಮಿಳುನಾಡಿನ ವೆಲ್ಲೂರು ಜಿಲ್ಲೆಯ ಪಂಜೂರ್ ಗ್ರಾಮದ ಬಳಿ ಹಳಿತಪ್ಪಿದ ಪರಿಣಾಮ 20 ಪ್ರಯಾಣಿಕರು ಗಾಯಗೊಂಡಿದ್ದಾರೆ.

ಎಸ್ 4 - ಎಸ್ 9 ವರೆಗಿನ 11 ಬೋಗಿಗಳು ಬೆಳಿಗ್ಗೆ 4 :15 ವೇಳೆ ಹಳಿತಪ್ಪಿವೆ.  ರೈಲ್ವೆ ರಕ್ಷಣಾ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿದ್ದು ಗಾಯಗೊಂಡಿರುವ ಪ್ರಯಾಣಿಕರ ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ.  ಗಾಯಗೊಂಡಿರುವ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲು ವಿಶೇಷ ಬಸ್ ಗಳ ವ್ಯವಸ್ಥೆ ಮಾಡಲಾಗಿದ್ದು. ಪ್ರಯಾಣಿಕರಿಗೆ ಬೆಂಗಳೂರಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ರೈಲು ಹಳಿತಪ್ಪಿರುವುದರಿಂದ ಚೆನ್ನೈ ಮಾರ್ಗದ 2 ರೈಲು ಸಂಚಾರ ರದ್ದು ಮಾಡಲಾಗಿದೆ.
ಸಹಾಯವಾಣಿ ವಿವರ:
ಮಧುರೈ: 0452-2308250

ಸೇಲಂ: 0427-2431947

ತ್ರಿಚೂರ್: 0487-2430060

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com