ಪೊಲೀಸರ ಪ್ರಕಾರ, ತಿರುನೆಲ್ವೆಲ್ಲಿ ಜಿಲ್ಲೆಯಿಂದ ಕುಮಿಲಿಗೆ ತರಳುತ್ತಿದ್ದ ಬಸ್ ಹಾಗೂ ತೆಂಕಸಿಗೆ ತೆರಳುತ್ತಿದ್ದ ಸಿಮೆಂಟ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಬಸ್ಸಿನಲ್ಲಿ ಒಟ್ಟು 40 ಪ್ರಯಾಣಿಕರಿದ್ದರು ಎನ್ನಲಾಗಿದೆ. ಅಪಘಾತದಲ್ಲಿ ಬಸ್ ಚಾಲಕ ಸೇರಿದಂತೆ 8 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.