ಬಾಬ್ರಿ ಮಸೀದಿ ಧ್ವಂಸ ಮಾಡಿದ ಸಂದರ್ಭದಲ್ಲಿ ಅದರ ಅಡಿಯಲ್ಲಿದ್ದ ರಾಮಲಲ್ಲಾ ದೇವಾಲಯವೂ ಧ್ವಂಸವಾಗಿದೆ. ಇದಕ್ಕೆ ಕಾರಣರಾದ ಎಲ್.ಕೆ. ಅಡ್ವಾಣಿ, ಮುರಳಿ ಮನೋಹರ್ ಜೋಷಿ ಮತ್ತು ಉಮಾಭಾರತಿಯ ವಿರುದ್ಧ ಪ್ರಕರಣ ದಾಖಲಿಸಲು ಹಿಂದೂ ಮಹಾಸಭೆ ನಿರ್ಧರಿಸಿದೆ ಎಂದು ಅಖಿಲ ಭಾರತ ಹಿಂದೂ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಸ್ವಾಮಿ ಚಕ್ರಪಾಣಿ ಮಾಧ್ಯಮಕ್ಕೆ ತಿಳಿಸಿದ್ದಾರೆ.