ಪೊಲೀಸರು ಅಲ್ಲೇ ಕಾರ್ಯ ನಿರತರಾಗಿದ್ದರೂ ಪಂಚಾಯತ್ ಚುನಾವಣೆಯಲ್ಲಿ ನಫೀಸಾ ಎಂಬಾಕೆ ಗೆಲವು ಸಾಧಿಸಿದ್ದಕ್ಕೆ ಸಮಾಜವಾದಿ ಪಕ್ಷದ ಕಾರ್ಯಕರ್ತರು ಗುಂಡು ಹಾರಿಸಿ ಸಂಭ್ರಮಾಚರಣೆ ನಡೆಸಿದ್ದರು. ಆ ವೇಳೆ ರಿಕ್ಷಾದಲ್ಲಿ ಅಮ್ಮನೊಂದಿಗೆ ತೆರಳುತ್ತಿದ್ದ ಹರ್ಷ್ ಎಂಬ ಬಾಲಕನಿಗೆ ಗುಂಡು ತಾಗಿದೆ. ನೇರ ಎದೆಗೆ ಗುಂಡು ಹೊಕ್ಕಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಬಾಲಕನನ್ನು ಬದುಕಿಸಲು ಸಾಧ್ಯವಾಗಲಿಲ್ಲ. ಬಾಲಕನ ಮೃತದೇಹವನ್ನು ರಸ್ತೆಯಲ್ಲಿಟ್ಟು ಆತನ ಸಂಬಂಧಿಕರು ಪ್ರತಿಭಟನೆಯನ್ನೂ ನಡೆಸಿದರು.