ಜಮ್ಮು ಮತ್ತು ಕಾಶ್ಮೀರದ ಸಿಯಾಚಿನ್ ನಲ್ಲಿ ಫೆಬ್ರವರಿ 3ರಂದು ಸಂಭವಿಸಿದ ಹಿಮಪಾತದಲ್ಲಿ ಭಾರತದ 10 ಯೋಧರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಸರ್ಕಾರ ಪ್ರಕಟಿಸಿತ್ತು. ಆದರೆ, 6 ದಿನಗಳ ಬಳಿಕ ಅಸ್ವಸ್ಥ ಸ್ಥಿತಿಯಲ್ಲಿ ಹನುಮಂತಪ್ಪ ಕೊಪ್ಪದ ಪತ್ತೆಯಾಗಿದ್ದಾರೆ. ಹನುಮಂತಪ್ಪ ಕೊಪ್ಪದ ಕರ್ನಾಟಕದ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಬೆಟದೂರಿನ ನಿವಾಸಿ.