ದಟ್ಟ ಮಂಜಿನಿಂದಾಗಿ ಹರ್ಯಾಣದಲ್ಲಿ ಸರಣಿ ಅಪಘಾತ: 4 ಸಾವು

ದಟ್ಟ ಮಂಜಿನಿಂದಾಗಿ ಹರ್ಯಾಣದ ಹೆದ್ದಾರಿಯಲ್ಲಿ ಮೂವತ್ತು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಒಂದೇ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ....
ಅಪಘಾತ
ಅಪಘಾತ

ನವದೆಹಲಿ: ದಟ್ಟ ಮಂಜಿನಿಂದಾಗಿ ಹರ್ಯಾಣದ ಹೆದ್ದಾರಿಯಲ್ಲಿ ಮೂವತ್ತು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಒಂದೇ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ದಟ್ಟ ಮಂಜಿನಿಂದಾಗಿ ಇಂದು ಬೆಳಗ್ಗೆ ಈ ಸರಣಿ ಅಪಘಾತ ಸಂಭವಿಸಿದೆ. ಲಾರಿಯೊಂದರ ಬ್ರೇಕ್ ಡೌನ್ ಆಗಿ ರಸ್ತೆ ಮಧ್ಯೆದಲ್ಲೇ ನಿಲ್ಲುತ್ತದೆ. ಈ ವೇಳೆ ಹಿಂದಿನಿಂದ ಬಂದ ವಾಹನವೊಂದು ಲಾರಿಗೆ ಡಿಕ್ಕಿ ಹೊಡೆಯುತ್ತದೆ. ತದ ನಂತರ 30-40 ಕಾರುಗಳು ಹಿಂದೊಂದರಂತೆ ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದೆ ಎಂದು ಹೈವೇ ಪೊಲೀಸ್ ಮುಖ್ಯಸ್ಥ ಮನೋಜ್ ಕುಮಾರ್ ಹೇಳಿದ್ದಾರೆ.

ಸರಣಿ ಅಪಘಾತದಲ್ಲಿ 30 ಕಾರುಗಳು ಸಂಪೂರ್ಣ ಜಕಂಗೊಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com