ದೆಹಲಿಯಲ್ಲಿ ಮತ್ತೆ ಸಮ-ಬೆಸ ಸಂಚಾರ ನಿಯಮ, ನಾಳೆ ನಿರ್ಧಾರ

ದೇಶಾದ್ಯಂತ ಭಾರಿ ಸುದ್ದಿ ಮಾಡಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಮ-ಬೆಸ ಸಾರಿಗೆ ನಿಯಮವನ್ನು ಮತ್ತೆ ಜಾರಿಗೊಳಿಸುವ ಬಗ್ಗೆ ದೆಹಲಿ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ದೇಶಾದ್ಯಂತ ಭಾರಿ ಸುದ್ದಿ ಮಾಡಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಮ-ಬೆಸ ಸಾರಿಗೆ ನಿಯಮವನ್ನು ಮತ್ತೆ ಜಾರಿಗೊಳಿಸುವ ಬಗ್ಗೆ ದೆಹಲಿ ಸರ್ಕಾರ ನಾಳೆ ನಿರ್ಧರಿಸಲಿದೆ.
'ಸಮ-ಬೆಸ ನಿಯಮ ಮತ್ತೆ ಜಾರಿಗೊಳಿಸಬೇಕು ಎಂದು ದೆಹಲಿಗರು ತಮ್ಮ ಹೃದಯದಿಂದ ಹೇಳುತ್ತಿದ್ದಾರೆ. ಹೀಗಾಗಿ ನಾಳೆ ಈ ಕುರಿತು ಎಲ್ಲಾ ಇಲಾಖೆಗಳ ಜೊತೆ ಸಭೆ ನಡೆಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು' ಎಂದು ದೆಹಲಿ ಉಪ ಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಅವರು ಹೇಳಿದ್ದಾರೆ.
ಪ್ರಾಯೋಗಿಕವಾಗಿ ಜನವರಿ 1ರಿಂದ 15 ದಿನಗಳ ಕಾಲ ಸಮ-ಬೆಸ ನಿಯಮ ಜಾರಿಗೆ ಮಾಡಲಾಗಿತ್ತು. ಈ ಬಗ್ಗೆ ಸರ್ಕಾರಿ ವೆಬ್ ಸೈಟ್ ನಲ್ಲಿ ಸುಮಾರು 12 ಲಕ್ಷ ಸಲಹೆಗಳು ಬಂದಿವೆ. ಅಲ್ಲದೆ ಈ ಕುರಿತು 200 ಜನ ಸಭಾಗಳನ್ನು ನಡೆಸಲಾಗಿದೆ ಎಂದು ಸಿಸೋಡಿಯಾ ತಿಳಿಸಿದರು.
ಆಮ್ ಆದ್ಮಿ ಸರ್ಕಾರ ಸಮ-ಬೆಸ ನಿಯಮವನ್ನು ಜಾರಿಗೊಳಿಸಲು ನಿರ್ಧರಿಸಿದ್ದು, ಮಾರ್ಚ್ ನಲ್ಲಿ ನಡೆಯುವ 10ನೇ ಹಾಗೂ 12 ತರಗತಿಯ ಪರೀಕ್ಷೆಗಳು ಮುಗಿದ ನಂತರ ಮತ್ತೆ ಸಮ-ಬೆಸ ನಿಯಮವನ್ನು ಪ್ರಾಯೋಗಿಕವಾಗಿ ಜಾರಿಗೊಳಿಸಲಾಗುವುದು ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com