ಸಂಜಯ್ ಸಿಂಗ್- ಕುಮಾರ್ ವಿಶ್ವಾಸ್
ದೇಶ
ರೈತ ಗಜೇಂದ್ರ ಆತ್ಮಹತ್ಯೆಗೆ ಪ್ರಚೋದನೆ: ಎಎಪಿ ನಾಯಕರಿಗೆ ಸಮನ್ಸ್ ಜಾರಿ
ರಾಜಸ್ಥಾನದ ರೈತ ಗಜೇಂದ್ರ ಸಿಂಗ್ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆಂಬ ಆರೋಪದ ಮೇಲೆ ಆಮ್ ಆದ್ಮಿ ಪಕ್ಷ...
ನವದೆಹಲಿ: ರಾಜಸ್ಥಾನದ ರೈತ ಗಜೇಂದ್ರ ಸಿಂಗ್ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆಂಬ ಆರೋಪದ ಮೇಲೆ ಆಮ್ ಆದ್ಮಿ ಪಕ್ಷ(ಎಎಪಿ)ದ ನಾಯಕರಿಗೆ ಸಮನ್ಸ್ ಜಾರಿ ಮಾಡಲಾಗಿದೆ.
ಎಎಪಿ ನಾಯಕರಾದ ಸಂಜಯ್ ಸಿಂಗ್, ಕುಮಾರ್ ವಿಶ್ವಾಸ್ ಮತ್ತು ಆಶಿಶ್ ಖೆತನ್, ಪಂಜಾಬ್ ನ ಸಂಸದ ಭಗವಂತ್ ಮನ್ ಮತ್ತು ನೀರಜ್ ಪಾಂಡೆ ಅವರಿಗೆ ದೆಹಲಿ ಪೊಲೀಸರು ಸಮನ್ಸ್ ನೀಡಿದ್ದಾರೆ.
ಕೇಂದ್ರ ಗೃಹ ಸಚಿವಾಲಯಕ್ಕೆ ದೆಹಲಿ ಪೊಲೀಸರು ನೀಡಿದ ವರದಿಯಲ್ಲಿ, ಎಎಪಿ ನಾಯಕರು ಪ್ರಚೋದನೆ ಮಾಡುತ್ತಿದ್ದರು. ಈ ವೇಳೆ ರ್ಯಾಲಿಯಲ್ಲಿ ಭಾಗವಹಿಸಿದ್ದ ಕಾರ್ಯಕರ್ತ ಗಜೇಂದ್ರ ಸಿಂಗ್ ಆತ್ಮಹತ್ಯೆಗೆ ಪ್ರಚೋದನೆ ನೀಡುತ್ತಿದ್ದರು ಎಂದು ಹೇಳಲಾಗಿದೆ.
ಏಪ್ರಿಲ್ 22ರಂದು ದೆಹಲಿಯ ಜಂತರ್ ಮಂತರ್ ನಲ್ಲಿ ಭೂಸ್ವಾಧೀನ ಮಸೂದೆ ವಿರೋಧಿಸಿ ಎಎಪಿ ಹಮ್ಮಿಕೊಂಡಿದ್ದ ರ್ಯಾಲಿಯಲ್ಲಿ ರೈತ ಗಜೇಂದ್ರ ಸಿಂಗ್ ಆತ್ಮಹತ್ಯೆಗೆ ಶರಣಾಗಿದ್ದರು.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ