ನವದೆಹಲಿ: ಆಮ್ ಆದ್ಮಿ ಪಕ್ಷದ ನಾಯಕ ಕುಮಾರ್ ವಿಶ್ವಾಸ್ ಹುಟ್ಟುಹಬ್ಬದ ನಿಮಿತ್ತ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಬಿಜೆಪಿ ನಾಯಕರು ಭಾಗವಹಿಸಿದ್ದರು.
ಎನ್ಎಸ್ ಎ ದೋವಲ್ ಅವರೊಂದಿಗೆ ಆರ್ ಎಸ್ಎಸ್ ಮುಖಂಡ ರಾಮ್ ಲಾಲ್, ಬಿಜೆಪಿ ನಾಯಕ ಓಂ ಮಾಥುರ್, ಕೇಂದ್ರ ಸಚಿವ ರವಿಶಂಕರ್, ಪಿಯೂಷ್ ಗೋಯೆಲ್ ಸಹ ಕುಮಾರ್ ವಿಶ್ವಾಸ್ ಅವರ ಹುಟ್ಟುಹಬ್ಬದ ಸಮಾರಂಭದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ಆದರೆ ಕುಮಾರ್ ವಿಶ್ವಾಸ್ ಪ್ರತಿನಿಧಿಸುವ ಆಮ್ ಆದ್ಮಿ ಪಕ್ಷದ ಮುಖಂಡ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮಾತ್ರ ಸಮಾರಂಭದಲ್ಲಿ ಭಾಗವಹಿಸಿರಲಿಲ್ಲ.
ಅರವಿಂದ್ ಕೇಜ್ರಿವಾಲ್ ಅವರ ಆರೋಪಕ್ಕೆ ನಿರಂತರವಾಗಿ ಗುರಿಯಾಗುವ ದೆಹಲಿ ಪೊಲೀಸ್ ಕಮಿಷನರ್ ಬಿಎಸ್ ಬಸ್ಸಿ ಸಹ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದು ಅಚ್ಚರಿಯುಂಟುಮಾಡಿದೆ. ಕುಮಾರ್ ವಿಶ್ವಾಸ್ ಅವರ ಹುಟ್ಟುಹಬ್ಬದ ಸಮಾರಂಭದಲ್ಲಿ ಬಿಜೆಪಿ ನಾಯಕರು ಭಾಗವಹಿಸಿರುವುದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಬಿಜೆಪಿ ಸೇರಲು ಚಿಂತನೆ ನಡೆಸಿದ್ದಾರೆ ಎಂಬ ಊಹಾಪೋಹಗಳಿಗೆ ದಾರಿ ಮಾಡಿಕೊಟ್ಟಿದೆ.
Advertisement