ತಮಿಳುನಾಡು ವಿಧಾನಸಭೆ ಚುನಾವಣೆ: ಕರುಣಾನಿಧಿ ಭೇಟಿ ಮಾಡಿದ ಕಾಂಗ್ರೆಸ್ ನ ಗುಲಾಂ ನಬಿ ಆಜಾದ್

ರಾಜ್ಯ ಸಭೆ ವಿರೋಧ ಪಕ್ಷದ ನಾಯಕ ಗುಲಾಂ ನಬೀ ಆಜಾದ್ ನೇತೃತ್ವದ ತಂಡ ತಮಿಳುನಾಡು ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಅಧ್ಯಕ್ಷ ಎಂ. ಕರುಣಾನಿಧಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದೆ....
ಕರುಣಾನಿಧಿ
ಕರುಣಾನಿಧಿ

ಚೆನ್ನೈ: ರಾಜ್ಯ ಸಭೆ ವಿರೋಧ ಪಕ್ಷದ ನಾಯಕ ಗುಲಾಂ ನಬೀ ಆಜಾದ್ ನೇತೃತ್ವದ ತಂಡ ತಮಿಳುನಾಡು ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಅಧ್ಯಕ್ಷ ಎಂ. ಕರುಣಾನಿಧಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದೆ.

ತಮಿಳುನಾಡಿನಲ್ಲಿ ಮುಂಬರುವ ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಡಿಎಂಕೆ ಮೈತ್ರಿ ಮಾಡಿಕೊಳ್ಳುವ ಸಂಬಂಧ ಸಮಾಲೋಚನೆ ನಡೆಸಲಾಗಿದೆ.

ತಮಿಳುನಾಡು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಇ.ವಿಕೆ. ಎಸ್ ಇಳಂಗೋವನ್ ಈ ವೇಳೆ ಉಪಸ್ಥಿತರಿದ್ದರು ಶ್ರೀಲಂಕಾದ ತಮಿಳಿಗರ ವಿಷಯ ಸಂಬಂಧ ಎರಡು ಪಕ್ಷಗಳ ನಡುವೆ ವಿರಸ ಏರ್ಪಟ್ಟಿತು. ಈಗ ಮೂರು ವರ್ಷಗಳ ನಂತರ ಮತ್ತೆ ಕಾಂಗ್ರೆಸ್ ಮತ್ತು ಡಿಎಂಕೆ  ಮೈತ್ರಿ ಸಾಧ್ಯತೆ ದಟ್ಟವಾಗಿದೆ.  

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com