ಪಟಿಯಾಲ ಕೋರ್ಟ್ ಆವರಣದಲ್ಲಿ ಗಲಾಟೆ: ವ್ಯಕ್ತಿ ಮೇಲೆ ಹಲ್ಲೆ ಮಾಡಿದ ಬಿಜೆಪಿ ಶಾಸಕ

ರಾಷ್ಟ್ರದ್ರೋಹ ಆರೋಪದ ಮೇಲೆ ಬಂಧಿತನಾಗಿರುವ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ, ಯೂನಿಯನ್ ಅಧ್ಯಕ್ಷ ಕನ್ಹಯ ಕುಮಾರ್ ನನ್ನು ಪಟಿಯಾಲ...
ಒಪಿ ಶರ್ಮಾ
ಒಪಿ ಶರ್ಮಾ

ನವದೆಹಲಿ: ರಾಷ್ಟ್ರದ್ರೋಹ ಆರೋಪದ ಮೇಲೆ ಬಂಧಿತನಾಗಿರುವ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ, ಯೂನಿಯನ್ ಅಧ್ಯಕ್ಷ ಕನ್ಹಯ ಕುಮಾರ್ ನನ್ನು ಪಟಿಯಾಲ ಹೌಸ್ ಕೋರ್ಟ್ ಮುಂದೆ ಹಾಜರು ಪಡಿಸುವ ವೇಳೆ ನಡೆದ ಘರ್ಷಣೆಯಲ್ಲಿ ಬಿಜೆಪಿ ಶಾಸಕ ಒ.ಪಿ ಶರ್ಮಾ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ಮಾಡಿದ್ದಾರೆ.

ಪಟಿಯಾಲ ಕೋರ್ಟ್ ಆವರಣದಲ್ಲಿ ಘರ್ಷಣೆ ವೇಳೆ ಶರ್ಮಾ ಕೆಳಗೆ ಬಿದ್ದ ವ್ಯಕ್ತಿಯನ್ನು ಕಾಲಿನಿಂದ ಒದ್ದಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ವೇಳೆ ಮಾತನಾಡಿದ ಒ.ಪಿ ಶರ್ಮಾ ದೇಶವಿರೋಧಿ ಘೋಷಣೆಗಳು ಹರಡಬಾರದು. ಅಂತ ದೇಶ ವಿರೋಧಿ ಹೇಳಿಕೆಗಳನ್ನು ನೀಡಿದರೆ ಅಂತವರನ್ನು ಒದೆಯಲಾಗುವುದು ಎಂದರು.

ಈ ಮಧ್ಯೆ ವ್ಯಕ್ತಿಯೊರ್ವನ ಮೇಲೆ ಹಲ್ಲೆ ಕುರಿತಂತೆ ಕೇಳಿದ ಪ್ರಶ್ನೆಗೆ ಶರ್ಮಾ ಅವರು, ನಾನು ವ್ಯಕ್ತಿಯ ಮೇಲೆ ಹಲ್ಲೆ ಮಾಡಿಲ್ಲ. ಪಾಕಿಸ್ತಾನ ಪರ ಘೋಷಣೆಯನ್ನು ಕೂಗುತ್ತಿದ್ದ ವ್ಯಕ್ತಿ ಕೆಳಗೆ ಬೀಳುತ್ತಿದ್ದರಿಂದ ಹಿಡಿದುಕೊಳ್ಳಲು ಯತ್ನಿಸಿದ್ದೆ ಎಂದು ಆರೋಪವನ್ನು ತಳ್ಳಿಹಾಕಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com