ಮೂಲಗಳ ಪ್ರಕಾರ ಅಗ್ನಿ ಅವಘಡ ಸಂಭವಿಸುವಾಗ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಅವರ ಪತ್ನಿ ಅಮೃತ ಫಡ್ನವೀಸ್, ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ, ಬಾಲಿವುಡ್ ನಟ ಅಮಿತಾಭ್ ಬಚ್ಚನ್, ಅಮಿರ್ ಖಾನ್, ಮಹಾರಾಷ್ಟ್ರ ಗವರ್ನರ್ ಸಿ.ವಿದ್ಯಾಸಾಗರ್ ರಾವ್ ಇದ್ದರು ಎಂದು ಹೇಳಲಾಗುತ್ತಿತ್ತು. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಭದ್ರತಾಧಿಕಾರಿಗಳು ಸ್ಟೇಜ್ ಮೇಲಿದ್ದ ವಿಐಪಿಗಳು ಹಾಗೂ ಕಲಾವಿದರನ್ನೆಲ್ಲರನ್ನು ಕೆಳಗಿಳಿಸಿದ್ದರು.