ಮಹಾರಾಷ್ಟ್ರ ಸರ್ಕಾರ ಬರ ಪೀಡಿತ ಪ್ರದೇಶದ ರೈತರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಹೊಸ ಯೋಜನೆಯೊಂದನ್ನು ಹಮ್ಮಿಕೊಂಡಿದೆ. 2019ರ ವೇಳೆಗೆ ಮಹಾರಾಷ್ಟ್ರವನ್ನು ಬರ ಮುಕ್ತ ವನ್ನಾಗಿ ಮಾಡುವ ಯೋಜನೆ ಇದಾಗಿದೆ. ಈ ಯೋಜನೆಯಡಿಯಲ್ಲಿ ಸುಮಾರು 25,000 ಬರ ಪೀಡಿತ ಗ್ರಾಮಗಳನ್ನು ಬರ ಮುಕ್ತಗೊಳಿಸುವುದು ಸರ್ಕಾರದ ಉದ್ದೇಶವಾಗಿದೆ.