ಈ ವೇಳೆ ಮಾತನಾಡಿದ್ದ ವೆಂಕಯ್ಯ ನಾಯ್ಡು ಅವರು, ಪ್ರತಿಪಕ್ಷಗಳ ಕೇಳುವ ಪ್ರಶ್ನೆಗಳಿಗೆ ಉತ್ತರಿಸಲು ನಾವು ಸಿದ್ಧರಿದ್ದು, ಸಮಸ್ಯೆಗಳನ್ನು ಬಗೆಹರಿಸುತ್ತೇವೆ. ಇದೇ ರೀತಿಯ ವಾತಾವರಣ ಸಂಸತ್ತಿನಲ್ಲಿಯೂ ಇರಲಿದೆ ಎಂದು ಭಾವಿಸುತ್ತೇನೆ ಎಂದು ಹೇಳಿದರು. ನಂತರ ಜೆಎನ್ ಯು ವಿವಾದ ಕುರಿತಂತೆ ಬಿಜೆಪಿ ನಾಯಕರು ನೀಡುತ್ತಿರುವ ಹೇಳಿಕೆ ಕುರಿತಂತೆ ಮಾತನಾಡಿದ ಸಿಪಿಐ, ಸಿಪಿಐ(ಎಂ) ಹಾಗೂ ಕಾಂಗ್ರೆಸ್ ಪಕ್ಷದ ನಾಯಕರು, ಪ್ರಕರಣ ಸಂಬಂಧ ಬಿಜೆಪಿ ನಾಯಕರು ಬಾಯಿಗೆ ಬಂದಂತೆ ಹೇಳಿಕೆಯನ್ನು ನೀಡುತ್ತಿದ್ದು, ಅದನ್ನು ನಿಯಂತ್ರಿಸಬೇಕಿದೆ ಎಂದು ಹೇಳಿದರು.