ದೇಶದ್ರೋಹಿ ಹೇಳಿಕೆ: ಎಸ್ಎಆರ್ ಗಿಲಾನಿಗೆ 2 ವಾರಗಳ ನ್ಯಾಯಾಂಗ ಬಂಧನ

ದೆಹಲಿ ಪ್ರೆಸ್ ಕ್ಲಬ್ ನಲ್ಲಿ ದೇಶದ್ರೋಹಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಲ್ಲಿ ವಿಶ್ವವಿದ್ಯಾಲಯ ನಿವೃತ್ತ ಪ್ರಾಧ್ಯಪಕ ಪ್ರೊ. ಗಿಲಾನಿಗೆ 2 ವಾರಗಳ ನ್ಯಾಯಾಂಗ...
ಎಸ್ಎಆರ್ ಗಿಲಾನಿ
ಎಸ್ಎಆರ್ ಗಿಲಾನಿ
Updated on

ನವದೆಹಲಿ: ದೆಹಲಿ ಪ್ರೆಸ್ ಕ್ಲಬ್ ನಲ್ಲಿ ದೇಶದ್ರೋಹಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಲ್ಲಿ ವಿಶ್ವವಿದ್ಯಾಲಯ ನಿವೃತ್ತ ಪ್ರಾಧ್ಯಪಕ ಪ್ರೊ. ಎಸ್.ಎ.ಆರ್ ಗಿಲಾನಿಗೆ 2 ವಾರಗಳ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶಿಸಿದೆ.

ಫೆಬ್ರವರಿ 10ರಂದು ಪ್ರೆಸ್‌ಕ್ಲಬ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅಫ್ಝಲ್‌ ಗುರುವಿಗೆ  ಜೈಕಾರ ಕೂಗಿ ವಿವಾದ ಸೃಷ್ಟಿಸಿದ್ದ ಗಿಲಾನಿಯನ್ನು ಬಂಧಿಸಲಾಗಿತ್ತು. ಇಂದಿಗೆ ಗಿಲಾನಿ ಪೊಲೀಸ್ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆ  ಪಾಟಿಯಾಲ ಕೋರ್ಟ್ ಮುಂದೆ ಹಾಜರುಪಡಿಸಲಾಯಿತು.

ಪ್ರಕರಣ ವಿಚಾರಣೆ ನಡೆಸಿದ ಕೋರ್ಟ್ ಗಿಲಾನಿಗೆ 2 ವಾರಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. ಗಿಲಾನಿ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com