ರೈತರ ಕಲ್ಯಾಣಕ್ಕಾಗಿ ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನ ಸಂಯೋಜನೆ: ಮೋದಿ

ರೈತರ ಕಲ್ಯಾಣಕ್ಕಾಗಿ ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನ ಸಂಯೋಜನೆ ಮಾಡಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ...
ನರೇಂದ್ರ ಮೋದಿ
ನರೇಂದ್ರ ಮೋದಿ
Updated on

ನವದೆಹಲಿ: ರೈತರ ಕಲ್ಯಾಣಕ್ಕಾಗಿ ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನ ಸಂಯೋಜನೆ ಮಾಡಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಮಧ್ಯಪ್ರದೇಶದಲ್ಲಿ ನಡೆದ ಕಿಸಾನ್ ಕಲ್ಯಾಣ್ ಮೇಳಾದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದಲ್ಲಿ ರಾಜ್ಯದಲ್ಲಿ ರೈತರಿಗಾಗಿ ಹಲವು ಕಲ್ಯಾಣ ಕಾರ್ಯಗಳನ್ನು ಮಾಡಿದ್ದಾರೆ. ಕಳೆದ ನಾಲ್ಕು ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಮಹಾನ್ ಸಾಧನೆ ಮಾಡುವುದು ಸುಲಭದ ಕೆಲಸವೆನಲ್ಲ ಎಂದು ಹೇಳಿದ್ದಾರೆ.

ದೇಶದಲ್ಲಿ ಕೃಷಿ ಇತಿಹಾಸ ನಿರ್ಮಿಸಬೇಕಾದರೆ ಸರ್ಕಾರ ಹಾಗೂ ರೈತರು ಜೊತೆಯಾಗಿ ಕೆಲಸ ಮಾಡಬೇಕಿದೆ ಎಂದರು.

ಒಬ್ಬನೇ ಒಬ್ಬ ರೈತನ ಬೆಳೆ ನಷ್ಟವಾದರೂ ಆತ ಪರಿಹಾರಕ್ಕೆ ಅರ್ಹ ಎಂದ ಅವರು, ಬರಗಾಲ ಅಥವಾ ನೆರೆಯಿಂದ ಸಂತ್ರಸ್ತರಾದ ರೈತರಿಗೆ ಸಹಾಯ ಹಸ್ತವಾಗಿ ಕಿಸಾನ್ ವಿಮಾ ಯೋಜನೆ ಮೂಲಕ ಧೈರ್ಯ ತುಂಬುವ ಕಾರ್ಯ ನಡೆಯಲಿದೆ ಎಂದು ಮೋದಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com