ಈ ಕುರಿತಂತೆ ಮಾತನಾಡಿರುವ ರಾಜ್ಯ ಕೃಷಿ ಸಚಿವ ಒಪಿ.ಧನ್ಕರ್ ಅವರು, ಸಮುದಾಯ ಪ್ರತಿಭಟನೆ ಸಂಬಂಧಿಸಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಇಂದು ಸರ್ವಪಕ್ಷ ಸಭೆಯನ್ನು ಕರೆದಿದ್ದು, ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಪ್ರತಿಭಟನೆ ಸಂಬಂಧ ಆಡಳಿತ ಮಂಡಳಿ ಹಾಗೂ ಪೊಲೀಸರು ಚುರುಕಾಗಿ ಕಾರ್ಯನಿರ್ವಹಿಸುತ್ತಿದ್ದು, ಬಿಕ್ಕಟ್ಟನ್ನು ಪರಿಹರಿಸುವ ಎಲ್ಲಾ ಪ್ರಯತ್ನಗಳನ್ನು ಸರ್ಕಾರ ಮಾಡುತ್ತಿದೆ ಎಂದು ಹೇಳಿದ್ದಾರೆ.