ನವದೆಹಲಿ: ಆರು ದಿನಗಳ ಭಾರತ ಕೈಗೊಂಡಿರುವ ನೇಪಾಳ ಪ್ರಧಾನಿ ಕೆ.ಪಿ ಶರ್ಮಾ ಒಲಿ ಅವರು ರಾಜ್ ಘಾಟ್ ನಲ್ಲಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಪುಷ್ಪನಮನ ಸಲ್ಲಿಸಿದರು.
ಭಾರತಕ್ಕೆ ಬಂದಿಳಿದ ನೇಪಾಳ ಪ್ರಧಾನಿಗೆ ಮೊದಲು ರಾಷ್ಟ್ರಪತಿ ಭವನದಲ್ಲಿ ವಿದ್ಯುಕ್ತವಾಗಿ ಸ್ವಾಗತಿಸಲಾಯಿತು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ವಿತ್ತ ಸಚಿವ ಅರುಣ್ ಜೇಟ್ಲಿ, ಗೃಹ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ದೆಹಲಿಯಲ್ಲಿರುವ ಹೈದರಾಬಾದ್ ಹೌಸ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೆಪಿ ಶರ್ಮಾ ಒಲಿ ಅವರು ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.
Advertisement