ಇದು ನನ್ನ ಸೈದ್ಧಾಂತಿಕ ನಿಲುವು. ಯಾರೊಬ್ಬರು ನನ್ನಲ್ಲಿ ಹಾಗೆ ಹೇಳಿ, ಹೀಗೆ ಹೇಳಿ ಅಂದಿಲ್ಲ. ನಾನು ಮಾನವೀಯತೆ ಇರುವ ಕವಿ. ನನ್ನ ಕವನಗಳನ್ನು ಓದಿದರೆ ನಿಮಗೆ ಅದು ಅರ್ಥವಾಗುತ್ತದೆ. ಸಂಘ, ಬಿಜೆಪಿ ಅಥವಾ ಇನ್ಯಾವುದೇ ಆಗಿರಲಿ...ನನಗೆ ಯಾವುದೇ ರಾಜಕೀಯ ಪಕ್ಷದೊಂದಿಗೆ ಸಂಬಂಧವಿಲ್ಲ. ನಾನು ಈ ವಿಷಯವನ್ನು ಹೇಳಿದೆ ಅಷ್ಟೇ, ರಾಜಕೀಯವೆಂಬುದು ಮೂರನೇ ದರ್ಜೆಯ ಕೆಲಸ.