ಪ್ರಧಾನಿ ನರೇಂದ್ರ ಮೋದಿ ಎದುರು ವಿದ್ಯಾರ್ಥಿಗೆ ಥಳಿತ

ವಿದ್ಯಾರ್ಥಿ ಸಂಘದ ಚುನಾವಣೆ ನಡೆಸಬೇಕೆಂದು ಆಗ್ರಹಿಸಿದ ವಿದ್ಯಾರ್ಥಿ ನಾಯಕನಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಮುಂದೆಯೇ ಬಿಜೆಪಿ ಕಾರ್ಯಕರ್ತರು ಥಳಿಸಿದ ಘಟನೆ

ವಾರಣಾಸಿ: ಬನಾರಸ್ ಹಿಂದೂ ವಿಶ್ವ ವಿದ್ಯಾನಿಲಯದ ವಿದ್ಯಾರ್ಥಿ ಸಂಘದ ಚುನಾವಣೆ ನಡೆಸಬೇಕೆಂದು ಆಗ್ರಹಿಸಿದ ವಿದ್ಯಾರ್ಥಿ ನಾಯಕನಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಮುಂದೆಯೇ ಸಾರ್ವಜನಿಕರು  ಥಳಿಸಿದ ಘಟನೆ ನಡೆದಿದೆ.

ಬನಾರಸ್  ಹಿಂದೂ ವಿವಿಯ ಘಟಿಕೋತ್ಸವದಲ್ಲಿ ಪಾಲ್ಗೊಂಡು ಪ್ರಧಾನಿ ಮೋದಿ ಭಾಷಣ ಮಾಡುತ್ತಿದ್ದರು. ಈ ವೇಳೆ ಅಶುತೋಷ್ ಎಂಬ ವಿದ್ಯಾರ್ಥಿ ನಾಯಕ ಪ್ರಧಾನಿ ಮೋದಿ ತಮ್ಮ ಭಾಷಣ ಮುಗಿಸುತಿದ್ದಂತೆ ಚುನಾವಣೆ ಬೇಡಿಕೆ ಮುಂದಿರಿಸಿದ. ಕೂಡಲೇ ಪೊಲೀಸರು ಆತನನ್ನು ವಶಕ್ಕೆ ಪಡೆದು ಕೊಂಡರು.

15 ನೇ ಶತಮಾನದ ಕವಿ ರವಿದಾಸ್ ಅವರ ಜನ್ಮ ದಿನಾಚರಣೆ ಸಮಾರಂಭದಲ್ಲೂ ಮೋದಿ ಭಾಗವಹಿಸಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com