ಇನ್ನು ಈ ವೇಳೆ ಮಾತನಾಡಿದ ಹರಿಯಾಣ ಸಿಎಂ, ಸಂಪೂರ್ಣ ಘಟನೆಗಳ ಬಗ್ಗೆ ಪರಿಶೀಲಿಸಲು ಸಮಿತಿಯೊಂದನ್ನು ರಚಿಸಲಾಗುವುದು. ಲೋಪದೋಷ ಎಸಗಿದ ಯಾರೇ ಆಗಿದ್ದರೂ ಅವರನ್ನು ಶಿಕ್ಷಿಸಲಾಗುವುದು. ಚಳವಳಿ ಸಂದರ್ಭದಲ್ಲಿ ಆಸ್ತಿಪಾಸ್ತಿಗೆ ಹಾನಿ ಉಂಟು ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಅಲ್ಲದೆ ಚಳವಳಿ ಕಾಲದಲ್ಲಿ ನಡೆದದ್ದೆಲ್ಲವೂ ಷಡ್ಯಂತ್ರದ ಭಾಗ ಎಂದು ಅವರು ನುಡಿದರು.