ಪೊಲೀಸರಿಗೆ ಶರಣಾಗುವ ಮುನ್ನ ತಮಗೆ ಪೊಲೀಸ್ ರಕ್ಷಣೆ ಕೋರಿ ಉಮರ್ ಖಲೀದ್ ಹಾಗೂ ಅನಿರ್ಬನ್ ಭಟ್ಟಾಚಾರ್ಯ ಸಲ್ಲಿಸಿದ್ದ ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್, ಮಧ್ಯಂತರ ರಕ್ಷಣೆ ನೀಡಲು ನಿರಾಕರಿಸಿ, ತಮ್ಮ ಆಯ್ಕೆಯ ಸ್ಥಳದಲ್ಲಿ ಪೊಲೀಸರಿಗೆ ಶರಣಾಗತರಾಗುವಂತೆ ವಿದ್ಯಾರ್ಥಿಗಳಿಗೆ ಸೂಚಿಸಿದೆ. ಆದರೆ ಪೊಲೀಸರು ಈ ಸಲಹೆಯನ್ನು ವಿರೋಧಿಸಿದ್ದಾರೆ.