ಜೆಎನ್ ಯು ವಿವಾದಕ್ಕೆ ಸಂಬಂಧಿಸಿ ನಿನ್ನೆಯಷ್ಟೇ ಕನ್ಹಯ್ಯ ಹಾಗೂ ವಿವಿಯ ಮತ್ತೈವರ ವಿರುದ್ಧ ವಿರುದ್ಧ ದಾಖಲಾಗಿರುವ ದೇಶದ್ರೋಹ ಪ್ರಕರಣ ಸಂಬಂಧ ಹಲವಾರು ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ವೇಳೆ ವಿವಿ ಉಪ ಕುಲಪತಿ ಜಗದೀಶ್ ಕುಮಾರ್ ಅವರು ವಿದ್ಯಾರ್ಥಿಗಳ ಪರವಾಗಿ ನಿಂತು ಪ್ರಕರಣವನ್ನು ಹಿಂಪಡೆದು ವಿದ್ಯಾರ್ಥಿಗಳನ್ನು ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದ್ದರು.
ಇದರಂತೆ ವಿವಿಯ ಪ್ರಾಂಶುಪಾಲರ ನೇತೃತ್ವದಲ್ಲಿ ಜೆಎನ್ ಯು ಅಧಿಕಾರಿಗಳು ನಿನ್ನೆ ಸಭೆಯನ್ನು ನಡೆಸಿದ್ದರು. ಪ್ರಕರಣ ಸಂಬಂಧ ಆರೋಪಗಳು ಎಂದು ಹೇಳಲಾಗುತ್ತಿರುವ ಐವರು ವಿದ್ಯಾರ್ಥಿಗಳನ್ನು ಪೊಲೀಸರ ವಿವಿಗೆ ಬಂದು ಬಂಧಿಸುತ್ತಾರೋ ಅಥವಾ ವಿದ್ಯಾರ್ಥಿಗಳೇ ಶರಣಾಗುವಂತೆ ಸೂಚಿಸುತ್ತಾರೆಂಬುದರ ಕುರಿತಂತೆ ಯಾವುದೇ ರೀತಿಯ ನಿರ್ಧಾರಗಳನ್ನು ಕೈಗೊಳ್ಳಲಾಗಿರಲಿಲ್ಲ.
ಇದರಂತೆ ಮಾತನಾಡಿರುವ ಭುಪಿಂದರ್ ಅವರು, ವಿದ್ಯಾರ್ಥಿಗಳ ಬಂಧನ ಕುರಿತಂತೆ ಪೊಲೀಸರು ಈ ವರೆಗೂ ನಮ್ಮನ್ನು ಸಂಪರ್ಕಿಸಿಲ್ಲ. ಈ ಬಗ್ಗೆ ನಮ್ಮ ಬಳಿ ಅನುಮತಿಯನ್ನು ಕೇಳಿಲ್ಲ. ನಾವು ಕೂಡ ಪೊಲೀಸರ ಈ ಬಗ್ಗೆ ಮಾತನಾಡಿಲ್ಲ ಎಂದು ಹೇಳಿದ್ದಾರೆ.