ಈ ಅರ್ಜಿಯನ್ನು ಪರಿಶೀಲಿಸಿದ್ದ ನ್ಯಾಯಾಲಯವು ಉಮರ್ ಖಾಲಿದ್ ಹಾಗೂ ಅನಿರ್ಬನ್ ಭಟ್ಟಾಚಾರ್ಯಗೆ ರಕ್ಷಣೆ ನಿರಾಕರಿಸಿತ್ತು. ಅಲ್ಲದೆ,. ವಿದ್ಯಾರ್ಥಿಗಳೇ ನಿಗದಿಪಡಿಸಿದ ತಾವು ನಿರ್ಧರಿಸಿದ ಪ್ರದೇಶದಲ್ಲಿ ಪೊಲೀಸರ ಬಳಿ ಶರಣಾಗಬಹುದೆಂದು ಹೇಳಿ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿತ್ತು. ಇದರಂತೆ ಉಮರ್ ಖಾಲಿದ್ ಹಾಗೂ ಅನಿರ್ಬನ್ ರಹಸ್ಯ ಕಳೆದ ರಾತ್ರಿ ಪೊಲೀಸರ ಬಳಿ ಶರಣಾಗಿದ್ದರು. ಇದೀಗ ಇಬ್ಬರು ವಿದ್ಯಾರ್ಥಿಗಳನ್ನು ಬಂಧನಕ್ಕೊಳಪಡಿಸಿರುವ ದೆಹಲಿ ಪೊಲೀಸರು ಇಬ್ಬರು ವಿದ್ಯಾರ್ಥಿಗಳನ್ನು ರಹಸ್ಯ ಸ್ಥಳಕ್ಕೆ ಕರೆದೊಯ್ದು ಪ್ರಕರಣ ಸಂಬಂಧ ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.