ಅಪಘಾತದಿಂದ ಕೇರಳ ಸಿಎಂ ಉಮ್ಮನ್ ಚಾಂಡಿ ಪಾರು

ಇಂದು ಮುಂಜಾನೆ ಸಂಭವಿಸಿದ ಕಾರು ಅಪಘಾತದಲ್ಲಿ ಕೇರಳ ಸಿಎಂ ಉಮ್ಮನ್ ಚಾಂಡಿ ಆಶ್ಚರ್ಯಕರ ರೀತಿಯಲ್ಲಿ ಪಾರಾಗಿದ್ದಾರೆ....
ಉಮ್ಮನ್ ಚಾಂಡಿ
ಉಮ್ಮನ್ ಚಾಂಡಿ
Updated on

ಕೊಟ್ಟಾಯಂ: ಇಂದು ಮುಂಜಾನೆ ಸಂಭವಿಸಿದ ಕಾರು ಅಪಘಾತದಲ್ಲಿ ಕೇರಳ ಸಿಎಂ ಉಮ್ಮನ್ ಚಾಂಡಿ ಆಶ್ಚರ್ಯಕರ ರೀತಿಯಲ್ಲಿ ಪಾರಾಗಿದ್ದಾರೆ.

ಕೇರಳದ ಕನಕರಿ ವೈಕೋಮ್- ಇಟ್ಟುಮನೋರ್ ರಸ್ತೆಯಲ್ಲಿ ಚಲಿಸುತ್ತಿದ್ದ ಒಮನ್ ಚಾಂಡಿ ಅವರ ಕಾರರು ಇದ್ದಕ್ಕಿದ್ದಂತೆ ಸ್ಕಿಡ್ ಆಗಿದೆ.  ಡ್ರೈವರ್ ಪಕ್ಕ ಮುಂದಿನ ಸೀಟಿನಲ್ಲಿ ಕುಳಿತಿದ್ದ ಚಾಂಡಿ ಅವರ ಗನ್ ಮ್ಯಾನ್ ಗೆ ಸಣ್ಣ ಪುಟ್ಟ ಗಾಯಗಳಾಗಿವೆ, ಹಿಂದಿನ ಸೀಟಿನಲ್ಲಿ ಕುಳಿತಿದ್ದ ಚಾಂಡಿ ಪಾರಾಗಿದ್ದಾರೆ.

ಕೋಜಿಕೋಡ್ ನಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಕಾರ್ಯಕ್ರಮ ಮುಗಿಸಿ ವಾಪಸ್ ಮನೆಗೆ ತೆರಳುವಾಗ ಈ ಅಪಘಾತ ಸಂಭವಿಸಿದೆ.

ಅಪಘಾತಕ್ಕೆ ಇನ್ನೂ ನಿಖರವಾದ ಕಾರಣ ತಿಳಿದು ಬಂದಿಲ್ಲ. ಕಾರಿನ ಟೈರ್ ಪಂಚರ್ ಆಗಿ ಕಾರು ಚರಂಡಿಗೆ ಇಳಿದಿದೆಯೇ ಅಥವಾ ಚಾಲಕ ನಿದ್ದೆ ಮಂಪರಿನಲ್ಲಿ ಕಾರನ್ನು ಚರಂಡಿಗಿಳಿಸಿದ್ದಾನೆಯೇ ಎಂಬುದರ ಬಗ್ಗೆ ಇನ್ನೂ ಮಾಹಿತಿ ತಿಳಿದು ಬಂದಿಲ್ಲ.

ಘಟನೆ ನಂತರ ಚಾಂಡಿ ಪೈಲಟ್ ವಾಹನದಲ್ಲಿ ಮನೆಗೆ ತೆರಳಿದರು ಎಂದು ಮೂಲಗಳು ತಿಳಿಸಿವೆ. ಇನ್ನು ತಾವು ಸೀಟ್ ಬೆಲ್ಟ್ ಹಾಕಿಕೊಂಡಿದ್ದರಿಂದ ತಮಗೆ ಯಾವುದೇ ಗಾಯಗಳಾಗಿಲ್ಲ ಎಂದು ಚಾಂಡಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com