'ಮನ್ ಕಿ ಬಾತ್': ಮೋದಿಗೆ ವಿಶ್ವನಾಥ್ ಆನಂದ್, ಸಚಿನ್ ಸಾಥ್

ಭಾನುವಾರ ಆಕಾಶವಾಣಿಯಲ್ಲಿ ಪ್ರಸಾರವಾಗಲಿರುವ 17ನೇ ಆವೃತ್ತಿಯ ಮನ್ ಬಾತ್ ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಹಾಗೂ ಚೆಸ್ ಮಾಸ್ಟರ್ ವಿಶ್ವನಾಥ್ ಅವರು ಸಾಥ್ ನೀಡಲಿದ್ದಾರೆ...
'ಮನ್ ಕಿ ಬಾತ್': ಮೋದಿಗೆ ವಿಶ್ವನಾಥ್ ಆನಂದ್, ಸಚಿನ್ ಸಾಥ್
'ಮನ್ ಕಿ ಬಾತ್': ಮೋದಿಗೆ ವಿಶ್ವನಾಥ್ ಆನಂದ್, ಸಚಿನ್ ಸಾಥ್

ನವದೆಹಲಿ: ಭಾನುವಾರ ಆಕಾಶವಾಣಿಯಲ್ಲಿ ಪ್ರಸಾರವಾಗಲಿರುವ 17ನೇ ಆವೃತ್ತಿಯ ಮನ್ ಬಾತ್ ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಹಾಗೂ ಚೆಸ್ ಮಾಸ್ಟರ್ ವಿಶ್ವನಾಥ್ ಅವರು ಸಾಥ್ ನೀಡಲಿದ್ದಾರೆ.

ಕಾರ್ಯಕ್ರಮ ಇಂದು ಬೆಳಿಗ್ಗೆ 11 ಗಂಟೆಗೆ ಆರಂಭವಾಗಲಿದ್ದು, ಕಾರ್ಯಕ್ರಮದಲ್ಲಿ ಮೋದಿಯವರು ವಿದ್ಯಾರ್ಥಿಗಳ ಪರೀಕ್ಷೆ ಕುರಿತಂತೆ ಮಾತನಾಡಲಿದ್ದಾರೆ. ವಿದ್ಯಾರ್ಥಿಗಳು ಪರೀಕ್ಷೆ ವೇಳೆ ಧೃತಿಗೆಡದಂತೆ ಪಾಠ ಮಾಡಲಿದ್ದಾರೆ. ಮೋದಿಯವರ ಪಾಠಕ್ಕೆ ಇದೀಗ ಭಾರತೀಯ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಹಾಗೂ ಚೆಸ್ ಆಟಗಾರ ವಿಶ್ವನಾಥ್ ಆನಂದ್ ಅವರು ಕೂಡ ಸಾಥ್ ನೀಡಲಿದ್ದು, ವಿದ್ಯಾರ್ಥಿಗಳಿಗೆ ಸಲಹೆಗಳನ್ನು ನೀಡಲಿದ್ದಾರೆ.

ಮಾರ್ಚ್ 1 ರಿಂದ ಏಪ್ರಿಲ್ 24 ರವರೆಗೆ ದ್ವಿತೀಯ ಪಿಯುಸಿ ಹಾಗೂ 10ನೇ ತರಗತಿಯ ವಿದ್ಯಾರ್ಥಿಗಳಿ ಪರೀಕ್ಷೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಮೋದಿಯವರು ವಿದ್ಯಾರ್ಥಿಗಳ ಕುರಿತಂತೆ ಇಂದು ನಡೆಯಲಿರುವ 'ಮನ್ ಕಿ ಬಾತ್' ನಲ್ಲಿ ಮಾತನಾಡಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com