ಹೈದರಾಬಾದ್: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್, ಮಾಜಿ ಕೇಂದ್ರ ಸಚಿವರಾದ ಆನಂದ್ ಶರ್ಮಾ, ಸಿಪಿಎಂ ನಾಯಕ ಸೀತಾರಾಂ ಯೆಚೂರಿ, ಸಿಪಿಐ ನಾಯಕ ಡಿ.ರಾಜಾ ಸೇರಿದಂತೆ 9 ಮಂದಿ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿದ್ದಾರೆ.
ಬಂಧನಕ್ಕೊಳಗಾದ ಕನ್ಹಯ್ಯ ಕುಮಾರ್ಗೆ ಬೆಂಬಲ ಸೂಚಿಸಿದ ಇವರೆಲ್ಲರ ವಿರುದ್ಧ ಸ್ಥಳೀಯ ನ್ಯಾಯಾಲಯವೊಂದರ ನಿರ್ದೇಶನದ ಮೇರೆಗೆ ತೆಲಂಗಾಣ ಪೊಲೀಸರು ದೇಶದ್ರೋಹ ಪ್ರಕರಣ ದಾಖಲಿಸಿದ್ದಾರೆ.
ದೇಶದ್ರೋಹಿಗಳಿಗೆ ಬೆಂಬಲ ನೀಡಿದ ಆರೋಪದ ಮೇರೆಗೆ ಇವರ ವಿರುದ್ಧವೂ ಅದೇ ಪ್ರಕರಣ ದಾಖಲಿಸಬೇಕೆಂದು ಕೋರಿ ವಕೀಲ ಜನಾರ್ಧನ್.ಜಿ ಎಂಬುವರು ಕೋರ್ಟ್ ಮೊರೆ ಹೋಗಿದ್ದರು.
ಇನ್ನು ಕಾಂಗ್ರೆಸ್ ನಾಯಕ ಆನಂದ್ ಶರ್ಮಾ ಅಜಯ್ ಮಕೇನ್, ಜೆಡಿಯು ವಕ್ತಾರ ಕೆ,ಸಿ.ತ್ಯಾಗಿ, ಜೆಎನ್ ಯು ಸಂಶೋಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರುಗಳ ವಿರುದ್ಧವೂ ಸಹ ದೇಶದ್ರೋಹ ಕೇಸ್ ದಾಖಲಿಸಲಾಗಿದೆ. ನ್ಯಾಯಾಲಯ ಮಾರ್ಚ್ 4ಕ್ಕೆ ಪ್ರಕರಣದ ವಿಚಾರಣೆ ನಡೆಸಲಿದೆ.
Advertisement