ಉಗ್ರ ಸಂಘಟನೆ ವಿರುದ್ಧ ಈಗಾಗಲೇ ಮಾಹಿತಿಗಳನ್ನು ಕಲೆ ಹಾಕಿರುವ ಗುಪ್ತಚರ ಇಲಾಖೆಯು ದಾಳಿ ಹಿಂದೆ ಜೈಶ್-ಇ-ಮೊಹಮ್ಮದ್ ಸಂಘಟನೆ ಕೈವಾಡವಿರುದ್ಧ ಖಾತರಿಪಡಿಸಿದೆ. ಹೀಗಾಗಿ ಈ ಉಗ್ರ ಸಂಘಟನೆ ವಿರುದ್ಧ ಕ್ರಮಕೈಗೊಳ್ಳುವಂತೆ ಭಾರತ ಸರ್ಕಾರ ಪಾಕಿಸ್ತಾನಕ್ಕೆ ಆಗ್ರಹಿಸಿದೆ ಎಂದು ಹೇಳಲಾಗುತ್ತಿದೆ. ಉಗ್ರರ ದಾಳಿಯ ಪರಿಣಾಮ ಇದೀಗ ಭಾರತ-ಪಾಕಿಸ್ತಾನದ ನಡುವಿನ ಶಾಂತಿ ಮಾತುಕತೆ ಮೇಲೆ ಬೀರಿದ್ದು, ಭಯೋತ್ಪಾದನೆ ಮತ್ತು ಮಾತುಕತೆ ಎರಡು ಒಟ್ಟಾಗಿ ಹೋಗಲು ಸಾಧ್ಯವಿಲ್ಲ. ಉಗ್ರ ಸಂಘಟನೆ ವಿರುದ್ಧ ಪಾಕಿಸ್ತಾನ ಕ್ರಮ ಕೈಗೊಳ್ಳದೇ ಹೋದರು ಶಾಂತಿ ಮಾತುಕತೆ ಸಾಧ್ಯವಿಲ್ಲ ಎಂದು ಭಾರತ ಹೇಳಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.