ಕಾಂಗ್ರೆಸ್ ಹೇಳಿಕೆ ನಾಚಿಕೆಗೇಡು, ರಾಷ್ಟ್ರ ವಿರೋಧಿಗಳಿಗೆ ಬೆಂಬಲ ನೀಡುವಂತಿದೆ: ಬಿಜೆಪಿ

ಪಠಾಣ್‌ಕೋಟ್ ಉಗ್ರ ದಾಳಿಗೆ ಸಂಬಂಧಿಸಿದಂತೆ ಸರ್ಕಾರವನ್ನು ಟೀಕಿಸಿದ್ದ ಕಾಂಗ್ರೆಸ್‌ಗೆ ತಿರುಗೇಟು ನೀಡಿರುವ ಬಿಜೆಪಿ, ಕಾಂಗ್ರೆಸ್ ಹೇಳಿಕೆ...
ಮುಕ್ತಾರ್ ಅಬ್ಬಾಸ್ ನಖ್ವಿ
ಮುಕ್ತಾರ್ ಅಬ್ಬಾಸ್ ನಖ್ವಿ
ನವದೆಹಲಿ: ಪಠಾಣ್‌ಕೋಟ್ ಉಗ್ರ ದಾಳಿಗೆ ಸಂಬಂಧಿಸಿದಂತೆ ಸರ್ಕಾರವನ್ನು ಟೀಕಿಸಿದ್ದ ಕಾಂಗ್ರೆಸ್‌ಗೆ ತಿರುಗೇಟು ನೀಡಿರುವ ಬಿಜೆಪಿ, ಕಾಂಗ್ರೆಸ್ ಹೇಳಿಕೆ ನಾಚಿಕೆಗೇಡು ಮತ್ತು ರಾಷ್ಟ್ರ ವಿರೋಧಿಗಳಿಗೆ ಬೆಂಬಲ ನೀಡುವಂತಿದೆ ಎಂದಿದೆ.
ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಎಂದು ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಅವರು, ಕಾಂಗ್ರೆಸ್ ಉಗ್ರರ ಕೃತ್ಯಗಳ ಬಗ್ಗೆ ಪ್ರಶ್ನಿಸುವುದಿಲ್ಲ. ಆದರೆ ಭಯೋತ್ಪಾದನೆ ವಿರುದ್ಧದ ಹೋರಾಟವನ್ನು ಪ್ರಶ್ನಿಸುತ್ತದೆ ಎಂದರು.
'ಕಾಂಗ್ರೆಸ್ ಇಂತಹ ಅತೀ ಸೂಕ್ಷ್ಮ ವಿಷಯಗಳಲ್ಲೂ ಗೊಂದಲ ಸೃಷ್ಟಿಸಿ, ಜನರಿಗೆ ತಪ್ಪು ಮಾಹಿತಿ ನೀಡುತ್ತಿರುವುದು ಮತ್ತು ರಾಷ್ಟ್ರ ವಿರೋಧಿಗಳಿಗೆ ಪ್ರಚೋದನೆ ನೀಡುತ್ತಿರುವುದು ದುರದೃಷ್ಟಕರ' ಎಂದು ನಖ್ವಿ ಹೇಳಿದ್ದಾರೆ.
ಪಾಕಿಸ್ತಾನ ಜೊತೆ ನಡೆಸಿದ ಮಾತುಕತೆಯ ವಿವವರನ್ನು ಸರ್ಕಾರ ಬಹಿರಂಗಪಡಿಸಬೇಕು ಎಂಬ ಕಾಂಗ್ರೆಸ್ ಬೇಡಿಕೆಗೆ ಪ್ರತಿಕ್ರಿಯಿಸಿದ ನಖ್ವಿ, ಈ ಬಗ್ಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಸಂಸತ್ತಿನಲ್ಲಿ ಹೇಳಿಕೆ ನೀಡಿದ್ದಾರೆ. ಆದರೆ ಈ ವೇಳೆ ಕಾಂಗ್ರೆಸ್ 'ಒಂದು ಕುಟುಂಬದ ಭ್ರಷ್ಟಾಚಾರವನ್ನು ರಕ್ಷಿಸಲು ಕಲಾಪಕ್ಕೆ ಅಡಿಪಡಿಸಿತು' ಎಂದರು.
ಭಾರತ-ಪಾಕಿಸ್ತಾನ ದ್ವಿಪಕ್ಷೀಯ ಮಾತುಕತೆಗೆ ಸಂಬಂಧಿಸಿದಂತೆ ಡಿಸೆಂಬರ್ 14ರಂದು ಸುಷ್ಮಾ ಸ್ವರಾಜ್ ಅವರು ಸಂಸತ್ತಿನ ಉಭಯ ಸದನಗಳಲ್ಲೂ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್‌ನ ಎಲ್ಲಾ ಪ್ರಶ್ನೆಗಳಿಗೂ ಅವರು ಉತ್ತರ ನೀಡಿದ್ದಾರೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com