ಸೇತುವೆಯಿಂದ ಕೆಳಗುರುಳಿದ ಬಸ್: 6 ಮಂದಿ ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಬಸ್ ಕೆಳಗುರುಳಿದ ಪರಿಣಾಮ ಮಹಿಳೆ ಸೇರಿದಂತೆ 6 ಜನ ಸಾವನ್ನಪ್ಪಿದ್ದು...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ತ್ರಿಪುರ: ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಬಸ್ ಕೆಳಗುರುಳಿದ ಪರಿಣಾಮ ಮಹಿಳೆ ಸೇರಿದಂತೆ 6 ಜನ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬುಧವಾರ ರಾತ್ರಿ ತ್ರಿಪುರದಲ್ಲಿ ನಡೆದಿದೆ.
ಅಗರ್ತಾಲಾದಿಂದ ತ್ರಿಪುರ ದಕ್ಷಿಣ ಭಾಗದಲ್ಲಿರುವ ಬೆನೋನಿಯಾಗೆ ತೆರಳುತ್ತಿರಬೇಕಾದರೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಸೇತುವೆಯಿಂದ ಹಳ್ಳಕ್ಕೆ ಬಿದ್ದಿದೆ. ಘಟನೆಯಲ್ಲಿ ಸ್ಥಳದಲ್ಲೇ 6 ಜನರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಗೊಂಡ 15 ಮಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ. ಘಟನೆ ಕುರಿತು ತನಿಖೆ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com