ಸಿಎಂ ಮುಫ್ತಿ ವಿಧಿವಶ: ರಾಜನಾಥ್, ಅಮಿತ್ ಶಾ ತೀವ್ರ ಸಂತಾಪ

ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್ ನಿಧನಕ್ಕೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಅಧ್ಯಕ್ಷ ಅಮಿತ್ ಶಾ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ...
ಅಮಿತ್ ಶಾ, ರಾಜನಾಥ್ ಸಿಂಗ್
ಅಮಿತ್ ಶಾ, ರಾಜನಾಥ್ ಸಿಂಗ್

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್ ನಿಧನಕ್ಕೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಅಧ್ಯಕ್ಷ ಅಮಿತ್ ಶಾ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಮುಫ್ತಿ ಮೊಹಮ್ಮದ್ ಸಯೀದ್ ಅವರು ಪ್ರಬುದ್ಧ ರಾಜಕಾರಣಿಯಾಗಿದ್ದು, ಕಣಿವೆ ರಾಜ್ಯದಲ್ಲಿ ಶಾಂತಿ ಕಾಪಾಡಲು ಶ್ರಮಿಸಿದ್ದ ಸಯೀದ್ ಸಾವು ರಾಷ್ಟ್ರ ರಾಜಕಾರಣದಲ್ಲಿ ತುಂಬಲಾರದ ನಷ್ಟ ಉಂಟು ಮಾಡಿದೆ ಎಂದು ರಾಜನಾಥ್ ಸಿಂಗ್ ಸಂತಾಪ ವ್ಯಕ್ತಪಡಿಸಿದ್ದಾರೆ.

ಮೊಹಮ್ಮದ್ ಸಯೀದ್ ಓರ್ವ ಅಪರೂಪ ಧೀಮಂತ, ನಿರ್ಧಿಷ್ಟ ಗುರಿ ಹೊಂದಿದ್ದ ರಾಜಕಾರಣಿ. ಅವರ ಸಾವಿನಿಂದಾಗಿ ದೇಶಕ್ಕೆ ತುಂಬಲಾರದ ನಷ್ಟ. ಸಯೀದ್ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಕೋರುವೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com