ಈ ಹಿನ್ನೆಲೆಯಲ್ಲಿ ಚೌಹಾಣ್ ಅವರು ಸಂಸ್ಥೆಯ ಆವರಣದಲ್ಲಿರುವ ತಮ್ಮ ಹೋಟೆಲ್ ಕೊಠಡಿಯಿಂದ ಹೊರಗೆ ಬಂದಿರಲಿಲ್ಲ. ಇದೇ ವೇಳೆ, ವಿದ್ಯಾರ್ಥಿಗಳ ಪ್ರತಿಭಟನೆ ಕುರಿತ ಪ್ರಶ್ನೆಗೆ ಉತ್ತರಿಸಿದ ಚೌಹಾಣ್, ``ನಾನು ಬಂದಿದ್ದು ಕೆಲಸ ಮಾಡಲು. ನನಗೊಂದು ಅಜೆಂಡಾ ಇದೆ. ನನ್ನ ಕೆಲಸವನ್ನು ನಾನು ಮಾಡುತ್ತೇನೆ'' ಎಂದಿದ್ದಾರೆ. ಜತೆಗೆ, ವಿದ್ಯಾರ್ಥಿಗಳು ನನ್ನನ್ನು ಭೇಟಿ ಯಾಗಿ ಕೇಳಿಕೊಂಡರೆ, ಪ್ರತಿಭಟನೆಯ ವೇಳೆ ಅವರ ವಿರುದ್ಧ ದಾಖಲಾಗಿರುವ ಕೇಸು ಹಿಂಪಡೆಯುವ ಬಗ್ಗೆ ನಿರ್ಧರಿಸುತ್ತೇನೆ ಎಂದೂ ಹೇಳಿದ್ದಾರೆ.