ಇನ್ನು ಈ ಸಂಬಂಧ ಅವರ ಆಪ್ತರು ಮೆಹಬೂಬಾ ಮುಫ್ತಿ ಅವರನ್ನು ಶ್ರೀನಗರದ ನಿವಾಸದಲ್ಲಿ ಭೇಟಿ ಮಾಡಿ, ಸಿಎಂ ಆಗಿ ಅಧಿಕಾರ ವಹಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ. ಆದರೆ ತಂದೆಯ ಸಾವಿನಿಂದ ರಾಜ್ಯದಲ್ಲಿ ನಾಲ್ಕು ದಿನ ಶೋಕಾಚರಣೆ ಘೋಷಿಸಲಾಗಿದ್ದು, ಶೋಕಾಚರಣೆ ಅವಧಿ ಮುಗಿಯುವವರೆಗೆ ಪ್ರಮಾಣವಚನ ಸ್ವೀಕರಿಸುವುದಿಲ್ಲ ಎಂದು ಸ್ಪಷ್ಟಪಡಿಸಿರುವುದಾಗಿ ಪಿಡಿಪಿ ನಾಯಕರೊಬ್ಬರು ಮಾಧ್ಯಮಕ್ಕೆ ತಿಳಿಸಿದ್ದಾರೆ.