ದೆಹಲಿ ಕೊಳಗೇರಿಯಲ್ಲಿ ಅಗ್ನಿ ಅವಘಡ: ಮೂವರು ಮಕ್ಕಳ ಸಾವು

ದೆಹಲಿಯ ಉಸ್ಮನಾಪುರ್‌ ಕೊಳಗೇರಿ ಪ್ರದೇಶದಲ್ಲಿ ಶನಿವಾರ ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಒಂದೇ ಕುಟುಂಬಕ್ಕೆ ಸೇರಿದ ಮೂವರು ಮಕ್ಕಳು ಸಜೀವ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ದೆಹಲಿಯ ಉಸ್ಮನಾಪುರ್‌ ಕೊಳಗೇರಿ ಪ್ರದೇಶದಲ್ಲಿ ಶನಿವಾರ ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಒಂದೇ ಕುಟುಂಬಕ್ಕೆ ಸೇರಿದ ಮೂವರು ಮಕ್ಕಳು ಸಜೀವ ದಹನವಾಗಿದ್ದು, ಒಂದು ಮಗು ಗಂಭೀರವಾಗಿ ಗಾಯಗೊಂಡಿದೆ.
ಮೃತಪಟ್ಟ ಮಕ್ಕಳನ್ನು ರೀನಾ(10), ಮೀನಾ(7) ಹಾಗೂ 6 ತಿಂಗಳ ಮಗು ಮುಬಾರಕ್ ಎಂದು ಗುರುತಿಸಲಾಗಿದೆ. ಗಾಯಗೊಂಡ ಮತ್ತೊಂದು ಮಗುವಿನ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಗ್ನಿ ಆಕಸ್ಮಿಕದಿಂದಾಗಿ ಸುಮಾರು 25 ಗುಡಿಸಲುಗಳು ಬೆಂಕಿಗಾಹುತಿಯಾಗಿವೆ ಎನ್ನಲಾಗಿದೆ.
ಘಟನೆಗೆ ಇಲೆಕ್ಟ್ರಿಕ್ ಶಾರ್ಟ್ ಸರ್ಕಿಟ್​ಕಾರಣವಿರಬಹುದೆಂದು ಶಂಕಿಸಲಾಗಿದೆ. ಬೆಂಕಿ ನಂದಿಸಲು ಸುಮಾರು 1 ಗಂಟೆ ಕಾಲ ಅಗ್ನಿ ಶಾಮಕ ದಳ ಸಿಬ್ಬಂದಿ ಶ್ರಮಿಸಿತು ಎಂದು ಅಗ್ನಿಶಾಮಕ ದಳ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com