5. ಇಷ್ಟೇ ಅಲ್ಲ, ಮಾಲ್ಡಾದಲ್ಲಿ ವ್ಯಾಪಕವಾಗಿ ಓಪಿಯಂ ಕೃಷಿ ನಡೆಯುತ್ತಿದೆ. ಇದರ ಬಗ್ಗೆ ರಾಜ್ಯ ಸರ್ಕಾರಕ್ಕಾಗಲೀ, ಪೊಲೀಸರಿಗಾಗಿ ಮಾಹಿತಿ ಇಲ್ಲವೇ? ಪಶ್ಚಿಮ ಬಂಗಾಳ ಸರ್ಕಾರ ನಿದ್ದೆ ಮಾಡುತ್ತಿದೆಯೇ?. ಓಪಿಯಂ ಕೃಷಿ ಮತ್ತು ನಕಲಿ ನೋಟಿನ ದಂಧೆ ರಾಷ್ಟ್ರದ್ರೋಹಿ ಕೃತ್ಯಗಳು. ಈ ಪ್ರಕರಣದ ದಾಖಲೆಗಳು ಕಾಲಿಯಾಚಾಕ್ ಪೊಲೀಸ್ ಠಾಣೆಯಲ್ಲಿರುವುದರಿಂದಲೇ ಆ ಠಾಣೆಯ ಮೇಲೆ ದಾಳಿ ಮಾಡಲಾಯಿತು.