ತಮಿಳುನಾಡು ದೇವಾಲಯಗಳಲ್ಲಿ ಭಕ್ತರಿಗೆ ವಸ್ತ್ರ ಸಂಹಿತೆ: ಆದೇಶ ಮುಂದೂಡಿದ ಮದ್ರಾಸ್ ಹೈಕೋರ್ಟ್

ತಮಿಳುನಾಡಿನ ಹಿಂದೂ ದೇವಾಲಯಗಳಿಗೆ ಬರುವ ಭಕ್ತಾದಿಗಳಿಗೆ ಜನವರಿ 1 ರಿಂದ ಜಾರಿಗೆ ಬರುವಂತೆ ಆದೇಶಿಸಿದ್ದ ವಸ್ತ್ರ ಸಂಹಿತೆ ನಿಯಮವನ್ನು ಮದ್ರಾಸ್ ಹೈಕೋರ್ಟ್ ಜನವರಿ 18 ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಚೆನ್ನೈ: ತಮಿಳುನಾಡಿನ ಹಿಂದೂ ದೇವಾಲಯಗಳಿಗೆ ಬರುವ ಭಕ್ತಾದಿಗಳಿಗೆ ಜನವರಿ 1 ರಿಂದ ಜಾರಿಗೆ ಬರುವಂತೆ ಆದೇಶಿಸಿದ್ದ ವಸ್ತ್ರ ಸಂಹಿತೆ ನಿಯಮವನ್ನು ಮದ್ರಾಸ್ ಹೈಕೋರ್ಟ್ ಜನವರಿ 18ರವರೆಗೆ ಮುಂದೂಡಿದೆ.

ತಮಿಳುನಾಡಿನ ಹಿಂದೂ ಧಾರ್ಮಿಕ ಹಾಗೂ ಚಾರಿಟಬಲ್ ದತ್ತಿ ಇಲಾಖೆ (ಎಚ್ಆರ್ ಹಾಗೂ ಸಿಇ) ಅಧೀನಕ್ಕೆ ಒಳಪಡುವ ಎಲ್ಲಾ ದೇಗುಲಗಳಲ್ಲಿ ಈ ವಸ್ತ್ರ ಸಂಹಿತೆ ಜಾರಿಗೊಳಿಸಬೇಕು ಎಂದು ಮದ್ರಾಸ್ ಹೈಕೋರ್ಟ್ ನ ಮಧುರೈ ಪೀಠ ನವೆಂಬರ್ ನಲ್ಲಿ ಆದೇಶಿಸಿತ್ತು.

ಪುರುಷರಿಗೆ ಧೋತಿ ಹಾಗೂ ಪೈಜಾಮಾ, ಶರ್ಟ್ ಹಾಗೂ ಪ್ಯಾಂಟ್ ಜೊತೆಗೆ ಪ್ಯಾಂಟ್ ಧರಿಸಬಹುದು. ಮಹಿಳೆಯರು ಸೀರೆ, ಲಂಗ ದಾವಣಿ ಅಥವಾ ಚೂಡಿದಾರ್ ಧರಿಸಿ ಬರಬೇಕು. ಈ ನಿಯಮಗಳು ಮಕ್ಕಳಿಗೂ ಅನ್ವಯವಾಗುತ್ತದೆ ಎಂದು ಹೇಳಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com