ಐಸಿಸ್ ಕುರಿತು ಗುಪ್ತಚರ, ಪೊಲೀಸ್ ಅಧಿಕಾರಿಗಳೊಂದಿಗೆ ರಾಜನಾಥ್ ಸಿಂಗ್ ಸಭೆ

ಗುಪ್ತಚರ ಇಲಾಖೆ ಹಿರಿಯ ಅಧಿಕಾರಿಗಳು, ತನಿಖಾ ಸಂಸ್ಥೆ ಹಾಗೂ 13 ರಾಜ್ಯಗಳ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಶನಿವಾರ ಸಭೆ...
ರಾಜನಾಥ್ ಸಿಂಗ್
ರಾಜನಾಥ್ ಸಿಂಗ್
Updated on
ನವದೆಹಲಿ: ಗುಪ್ತಚರ ಇಲಾಖೆ ಹಿರಿಯ ಅಧಿಕಾರಿಗಳು, ತನಿಖಾ ಸಂಸ್ಥೆ ಹಾಗೂ 13 ರಾಜ್ಯಗಳ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಶನಿವಾರ ಸಭೆ ನಡೆಸಿದ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು, ಸಾಮಾಜಿಕ ಜಾಲ ತಾಣ ಹಾಗೂ ಇತರ ಮೂಲಗಳಿಂದ ಯುವಕರ ಮೇಲೆ ಪ್ರಭಾವ ಬೀರುತ್ತಿರುವ ಐಎಸ್‌ಐಎಸ್ ವಿರುದ್ಧ ಕ್ರಮ ತೆಗೆದುಕೊಳ್ಳುವ ಬಗ್ಗೆ ಚರ್ಚಿಸಿದರು.
ಭಾರತದ ಕೆಲ ಯುವಕರು ಐಎಸ್‌ ಉಗ್ರ ಸಂಘಟನೆ ಸೆಳೆತಕ್ಕೊಳಗಾಗಿ ಸೇರ್ಪಡೆಗೊಳ್ಳುತ್ತಿದ್ದಾರೆ. ಈ ದೊಡ್ಡ ಸವಾಲನ್ನು ನಿರ್ವಹಿಸುವ ಬಗ್ಗೆ ಮತ್ತು ಪ್ರಸ್ತುತ ಪರಿಸ್ಥಿತಿಯ ಪರಾಮರ್ಶೆ ನಡೆಸಲು ರಾಜನಾಥ್‌ ಅವರು ಸುದೀರ್ಘ ಸಭೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.
ಸಾಮಾಜಿಕ ಜಾಲ ತಾಣಗಳ ದುರ್ಬಳಕೆ, ಐಎಸ್‌ಐಗೆ ಭಾರತೀಯರನ್ನು ವಿಷೇಶವಾಗಿ ಯುವಕರನ್ನು ಆಕರ್ಷಿಸುತ್ತಿರುವ ಮೂಲಗಳ ಬಗ್ಗೆ ಹಾಗೂ ಅದರ ತಡೆಗೆ ತೆಗೆದುಕೊಳ್ಳಬಹುದಾದ ಕಾನೂನು ಕ್ರಮಗಳ ಕುರಿತು ಇಂದಿನ ಸಭೆಯಲ್ಲಿ ಚರ್ಚಿಸಲಾಯಿತು ಎಂದು ಗೃಹ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com